ನವದೆಹಲಿ,: “ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾ ಇರುವುದಿಲ್ಲ” ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ರೂಪುರೇಷೆ ಅಂತಿಮಗೊಳಿಸಲಾಗಿದೆ. ರಷ್ಯಾ ಸರ್ಕಾರದ ಸಹಯೋಗದೊಂದಿಗೆ ಅದನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಹೊಸ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಬ್ಯಾಂಕ್ ಖಾತೆಯಿಂದ ನೇರವಾಗಿ ಹಣ ಸಂದಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ‘ಅಸೋಚಾಮ್ ಸಂಸ್ಥಾಪನಾ ವಾರ’ ಆಚರಣೆಯ ಸಂದರ್ಭ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.
ಇತ್ತೀಚಿನ ಹೊಸ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳು ಜಿಪಿಎಸ್ ಒಳಗೊಂಡಿರುತ್ತವೆ. ಹಳೆಯ ವಾಹನಗಳಿಗೂ ಜಿಪಿಎಸ್ ಅಳವಡಿಸುವ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ರಷ್ಯಾ ಸರ್ಕಾರದ ಸಹಾಯದೊಂದಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತ ಪರೀಕ್ಷೆ ನಡೆಸಲಾಗಿದ್ದು ಯೋಜನೆ ಅಂತಿಮಗೊಳಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭಾರತವು ಟೋಲ್ ಬೂತ್ ರಹಿತ ಹೆದ್ದಾರಿಗಳನ್ನು ಹೊಂದಲಿದೆ. ಜಿಪಿಎಸ್ ವ್ಯವಸ್ಥೆ ಮೂಲಕ ವಾಹನಗಳನ್ನು ಟ್ರ್ಯಾಕ್ ಮಾಡಲಾಗುವುದು. ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಬಾಕಿ ಟೋಲ್ ಹಣ ಸಂದಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಐದು ವರ್ಷಗಳಲ್ಲಿ ₹1.34 ಲಕ್ಷ ಕೋಟಿ ಆದಾಯ ಸಂಗ್ರಹವಾಗಲಿದೆ ಎಂದು ಅವರು ತಿಳಿಸಿದ್ದಾರೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…