Featured

ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ : ನಿತಿನ್ ಗಡ್ಕರಿ -Vishwanews24

ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ : ನಿತಿನ್ ಗಡ್ಕರಿ -Vishwanews24

ನವದೆಹಲಿ,: “ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ” ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ರೂಪುರೇಷೆ ಅಂತಿಮಗೊಳಿಸಲಾಗಿದೆ. ರಷ್ಯಾ ಸರ್ಕಾರದ ಸಹಯೋಗದೊಂದಿಗೆ ಅದನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೊಸ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಬ್ಯಾಂಕ್ ಖಾತೆಯಿಂದ ನೇರವಾಗಿ ಹಣ ಸಂದಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ‘ಅಸೋಚಾಮ್ ಸಂಸ್ಥಾಪನಾ ವಾರ’ ಆಚರಣೆಯ ಸಂದರ್ಭ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.

ಇತ್ತೀಚಿನ ಹೊಸ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳು ಜಿಪಿಎಸ್ ಒಳಗೊಂಡಿರುತ್ತವೆ. ಹಳೆಯ ವಾಹನಗಳಿಗೂ ಜಿಪಿಎಸ್ ಅಳವಡಿಸುವ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ರಷ್ಯಾ ಸರ್ಕಾರದ ಸಹಾಯದೊಂದಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತ ಪರೀಕ್ಷೆ ನಡೆಸಲಾಗಿದ್ದು ಯೋಜನೆ ಅಂತಿಮಗೊಳಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭಾರತವು ಟೋಲ್ ಬೂತ್ ರಹಿತ ಹೆದ್ದಾರಿಗಳನ್ನು ಹೊಂದಲಿದೆ. ಜಿಪಿಎಸ್ ವ್ಯವಸ್ಥೆ ಮೂಲಕ ವಾಹನಗಳನ್ನು ಟ್ರ್ಯಾಕ್ ಮಾಡಲಾಗುವುದು. ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಬಾಕಿ ಟೋಲ್ ಹಣ ಸಂದಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಐದು ವರ್ಷಗಳಲ್ಲಿ ₹1.34 ಲಕ್ಷ ಕೋಟಿ ಆದಾಯ ಸಂಗ್ರಹವಾಗಲಿದೆ ಎಂದು ಅವರು ತಿಳಿಸಿದ್ದಾರೆ

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago