Featured

ದ.ಕ ಜಿಲ್ಲೆಯನ್ನು ಮುಂದಿನ ಐದು ವರ್ಷಗಳ ಅಭಿವೃದ್ಧಿಯಲ್ಲಿ ನಂ.1 ರೂಪಿಸುತ್ತೇವೆ :ನಳಿನ್ ಕುಮಾರ್ ಕಟೀಲ್ -Vishwanews24

ಮೂಡುಬಿದಿರೆ: ಕಳೆದ ಐದು ವರ್ಷದಲ್ಲಿ ಬಿಜೆಪಿ ಸ್ಥಳೀಯಾಡಳಿತ, ವಿಧಾನಸಭೆ, ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಮುಕ್ತವಾಗುತ್ತಿದೆ. ಚುನಾಯಿತ ಎಲ್ಲ ಅಭ್ಯರ್ಥಿಗಳು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಕಾರ್ಯಕರ್ತರು ಕೇಂದ್ರ ಸರ್ಕಾರದ ಆಡಳಿತವನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ದ.ಕ ಜಿಲ್ಲೆ ಲೋಕಸಭಾ ಕ್ಷೇತ್ರವನ್ನು ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿ ವಿಷಯದಲ್ಲಿ ನಂ.1 ರೂಪಿಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದರು.

ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಹಾಗೂ ಮೂಡುಬಿದಿರೆ ಪುರಸಭೆ ಹಾಗೂ ಮೂಲ್ಕಿ ನಗರಸಭೆಗೆ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳಿಗೆ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದು ಕೇವಲ ಸಂಸದನಿಗೆ ಮಾಡಿದ ಅಭಿನಂದನೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯ, ಜನಪರ ನಡೆಯನ್ನು ಮೆಚ್ಚಿದ ಮತದಾರರ, ಬಿಜೆಪಿಯ ಸರ್ಕಾರ, ಧ್ಯೇಯೋದ್ಧೇಶಗಳನ್ನು ಜನರಿಗೆ ತಲುಪಿಸಿದ ಕಾರ್ಯಕರ್ತರಿಗೆ ನೀಡಿದ ಅಭಿನಂದನೆ. ಜಿಲ್ಲೆಯ ಶೇ.80ರಷ್ಟು ಆಡಳಿತ ಬಿಜೆಪಿ ಪಕ್ಷದ ಕೈಯಲ್ಲಿದ್ದು, ಜನರಿಗೆ ಉತ್ತಮ ಆಡಳಿತ ನೀಡೋಣ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಾಕ್ಷ ಕೆ.ಪಿ ಜಗದೀಶ್ ಅಧಿಕಾರಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಜಯಾನಂದ ಮೂಲ್ಕಿ, ,ಬಿಜೆಪಿ ಮುಖಂಡರಾದ ಕೆ.ಆರ್ ಪಂಡಿತ್, ಬಾಹುಬಲಿ ಪ್ರಸಾದ್, ಎಂ.ಎಸ್ ಕೋಟ್ಯಾನ್, ಭುವನಾಭಿರಾಮ ಉಡುಪ, ರಮಾನಾಥ ಅತ್ತರ್, ಶಾಂತಿ ಪ್ರಸಾದ್ ಹೆಗ್ಡೆ, ಜಾಯ್ಲಸ್ ತಾಕೋಡೆ, ರಾಜೇಶ್ ಮಲ್ಯ, ಸೂರಜ್ ಜೈನ್, ಹರೀಶ್ ಎಂ.ಕೆ, ನಗರ ಹಾಗೂ ಪುರಸಭೆಗೆ ಆಯ್ಕೆಯಾದ ಅಭ್ಯರ್ಥಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago