Featured

ದ.ಕ ಜಿಲ್ಲೆಯನ್ನು ಮುಂದಿನ ಐದು ವರ್ಷಗಳ ಅಭಿವೃದ್ಧಿಯಲ್ಲಿ ನಂ.1 ರೂಪಿಸುತ್ತೇವೆ :ನಳಿನ್ ಕುಮಾರ್ ಕಟೀಲ್ -Vishwanews24

ಮೂಡುಬಿದಿರೆ: ಕಳೆದ ಐದು ವರ್ಷದಲ್ಲಿ ಬಿಜೆಪಿ ಸ್ಥಳೀಯಾಡಳಿತ, ವಿಧಾನಸಭೆ, ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಮುಕ್ತವಾಗುತ್ತಿದೆ. ಚುನಾಯಿತ ಎಲ್ಲ ಅಭ್ಯರ್ಥಿಗಳು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಕಾರ್ಯಕರ್ತರು ಕೇಂದ್ರ ಸರ್ಕಾರದ ಆಡಳಿತವನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ದ.ಕ ಜಿಲ್ಲೆ ಲೋಕಸಭಾ ಕ್ಷೇತ್ರವನ್ನು ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿ ವಿಷಯದಲ್ಲಿ ನಂ.1 ರೂಪಿಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದರು.

ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಹಾಗೂ ಮೂಡುಬಿದಿರೆ ಪುರಸಭೆ ಹಾಗೂ ಮೂಲ್ಕಿ ನಗರಸಭೆಗೆ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳಿಗೆ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದು ಕೇವಲ ಸಂಸದನಿಗೆ ಮಾಡಿದ ಅಭಿನಂದನೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯ, ಜನಪರ ನಡೆಯನ್ನು ಮೆಚ್ಚಿದ ಮತದಾರರ, ಬಿಜೆಪಿಯ ಸರ್ಕಾರ, ಧ್ಯೇಯೋದ್ಧೇಶಗಳನ್ನು ಜನರಿಗೆ ತಲುಪಿಸಿದ ಕಾರ್ಯಕರ್ತರಿಗೆ ನೀಡಿದ ಅಭಿನಂದನೆ. ಜಿಲ್ಲೆಯ ಶೇ.80ರಷ್ಟು ಆಡಳಿತ ಬಿಜೆಪಿ ಪಕ್ಷದ ಕೈಯಲ್ಲಿದ್ದು, ಜನರಿಗೆ ಉತ್ತಮ ಆಡಳಿತ ನೀಡೋಣ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಾಕ್ಷ ಕೆ.ಪಿ ಜಗದೀಶ್ ಅಧಿಕಾರಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಜಯಾನಂದ ಮೂಲ್ಕಿ, ,ಬಿಜೆಪಿ ಮುಖಂಡರಾದ ಕೆ.ಆರ್ ಪಂಡಿತ್, ಬಾಹುಬಲಿ ಪ್ರಸಾದ್, ಎಂ.ಎಸ್ ಕೋಟ್ಯಾನ್, ಭುವನಾಭಿರಾಮ ಉಡುಪ, ರಮಾನಾಥ ಅತ್ತರ್, ಶಾಂತಿ ಪ್ರಸಾದ್ ಹೆಗ್ಡೆ, ಜಾಯ್ಲಸ್ ತಾಕೋಡೆ, ರಾಜೇಶ್ ಮಲ್ಯ, ಸೂರಜ್ ಜೈನ್, ಹರೀಶ್ ಎಂ.ಕೆ, ನಗರ ಹಾಗೂ ಪುರಸಭೆಗೆ ಆಯ್ಕೆಯಾದ ಅಭ್ಯರ್ಥಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago