Featured

ಮುಂದಿನ ಚುನಾವಣೆಯಲ್ಲಿಯೂ ಮೋದಿ ಮೋದಿ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ : ಸಿದ್ದರಾಮಯ್ಯ -Vishwanews24

ಮುಂದಿನ ಚುನಾವಣೆಯಲ್ಲಿಯೂ ಮೋದಿ ಮೋದಿ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ : ಸಿದ್ದರಾಮಯ್ಯ -Vishwanews24

ಬೆಂಗಳೂರು, : ಮುಂದಿನ ಚುನಾವಣೆಯಲ್ಲಿಯೂ ಮೋದಿ ಮೋದಿ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಶಾಸಕಿ ಸೌಮ್ಯ ರೆಡ್ಡಿ ಆಯೋಜಿಸಿದ್ದ ಕೊರೋನ ವಾರಿಯರ್ಸ್, ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಜನತೆ ಕೇಂದ್ರದಲ್ಲಿ ಬಿಜೆಪಿಗೆ ಎರಡನೇ ಬಾರಿಗೆ ಅಧಿಕಾರ ನೀಡಿದರು. ಆದರೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲಲಿಲ್ಲ. ಬಿಪಿಎಲ್ ಕುಟುಂಬದಲ್ಲಿ ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿದೆ. ಆದರೆ, ಐದು ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಅವರು ಆಗ್ರಹಿಸಿದರು.

ಕೊರೋನ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ.ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಕೇಳಲಿಲ್ಲ. ಸರಕಾರ ಇರೋದು ಬಡವರಿಗೆ ಸ್ಪಂದಿಸಲು. ರಾಜ್ಯ ಸರಕಾರದ ಬಜೆಟ್ 2.42 ಲಕ್ಷ ಕೋಟಿ ರೂ. ಅದರಲ್ಲಿ 15-20 ಸಾವಿರ ಕೋಟಿ ರೂ.ಗಳನ್ನು ಬಡವರಿಗೆ ನೀಡಿದ್ದರೆ ಏನೂ ನಷ್ಟವಾಗುತ್ತಿರಲಿಲ್ಲ ಎಂದು ಅವರು ಹೇಳಿದರು.

ಪ್ಯಾಕೇಜ್‍ನಲ್ಲಿ ಕೆಲವರಿಗೆ ಪುಡಿಗಾಸು ಘೋಷಣೆ ಮಾಡಿದ್ದಾರೆ. ಅದು ಯಾರಿಗೆ ಸಿಗುವುದೋ ಯಾರಿಗೆ ಸಿಗುವುದಿಲ್ಲವೋ ಗೊತ್ತಿಲ್ಲ. ಈ ಹಿಂದೆ ಘೋಷಿಸಿದ ಪ್ಯಾಕೇಜ್ ನಿಂದಲೂ ಯಾರಿಗೂ ಅನುಕೂಲ ಆಗಲಿಲ್ಲ. ಕೊರೋನದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಒಬ್ಬರಿಗೆ ಮಾತ್ರ ಹಣ ಪಡೆಯುವುರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದಲ್ಲಿ ಕೋವಿಡ್‍ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಕೊರೋನ ಒಂದನೇ ಅಲೆಯಿಂದ ಎರಡನೇ ಅಲೆಯ ನಡುವೆ ಸಾಕಷ್ಟು ಸಮಯ ಇತ್ತು. ಆ ವೇಳೆ ಲಸಿಕೆ ತಯಾರಿಸಿ ಎಲ್ಲರಿಗೂ ಕೊಡಬಹುದಿತ್ತು, ಕೇಂದ್ರ ಸರಕಾರ ಆ ಕೆಲಸ ಮಾಡಲಿಲ್ಲ. ಲಸಿಕೆಯನ್ನು ಇಲ್ಲಿಯೇ ತಯಾರಿಸಲಿ ಅಥವಾ ಬೇರೆ ಕಡೆಯಿಂದ ತರಿಸಿಕೊಳ್ಳಲಿ. ಆದರೆ, ಎಲ್ಲರಿಗೂ ಲಸಿಕೆ ಸಿಗುವಂತಾಗಲಿ ಎಂದು ಅವರು ಹೇಳಿದರು.

ಸೆಪ್ಟಂಬರ್-ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಜನರ ಪ್ರಾಣ ಉಳಿಸುವುದು ಮುಖ್ಯ. ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೋನ ಬರುವುದಿಲ್ಲ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಕೇಂದ್ರ ಸರಕಾರ ಶೇ.75ರಷ್ಟು ಉಚಿತವಾಗಿ, ಶೇ.25ರಷ್ಟು ಲಸಿಕೆಗಳನ್ನು ಖಾಸಗಿಯಾಗಿ ಮಾರಾಟಕ್ಕಿಟ್ಟಿದೆ. ಅದನ್ನು ಕೈ ಬಿಟ್ಟು ಎಲ್ಲರಿಗೂ ಉಚಿತ ಲಸಿಕೆ ಕೊಡಬೇಕು. ನಮ್ಮ ಪಕ್ಷದ ಸರಕಾರ ಇದ್ದಿದ್ದರೆ ಬಡವರಿಗೆ 10 ಕೆ.ಜಿ.ಅಕ್ಕಿ ಮತ್ತು 10 ಸಾವಿರ ರೂಪಾಯಿಯನ್ನು ಕೊಡುತ್ತಿದ್ದೆವು. ಬಡವರಿಗೆ ನೆರವು ನೀಡಿದರೆ ಇವರ ಮನೆಯ ಗಂಟು ಹೋಗುತ್ತದೆಯೇ ಎಂದು ಸರಕಾರವನ್ನು ಅವರು ಪ್ರಶ್ನಿಸಿದರು.

ಇಂದಿರಾಗಾಂಧಿ ಅವರ ಫೋಟೋ ಇದೆ ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ನಿಲ್ಲಿಸಿದರು. ಇತ್ತೀಚೆಗೆ ಅದನ್ನು ಪುನಃ ಆರಂಭಿಸಿದರೂ ಬಾಕಿ ಬಿಲ್ ಪಾವತಿಸಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರವಾಗಿ ನಿಲ್ಲಲಿದೆ. ಸಂವಿಧಾನ ಹೇಳುವಂತೆ ಸರ್ವರಿಗೂ ಸಮಪಾಲು, ಸಮಬಾಳು ಸಿದ್ಧಾಂತವನ್ನು ಸರಕಾರಗಳು ಪಾಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅಚ್ಚೆ ದಿನ್ ಆಯೇಗಾ ಎನ್ನುತ್ತಿದ್ದರು. ಯುವಕರು ಮೋದಿ ಮೋದಿ ಎನ್ನುತ್ತಿದ್ದರು ಎಂದು ಅವರು ಹೇಳಿದರು.

ಪೆಟ್ರೋಲ್, ಡೀಸೆಲ್ 100 ರೂಪಾಯಿ ದಾಟಿದೆ. ನಾವು ಪ್ರತಿಭಟನೆ ಮಾಡಿದ ಮೇಲೂ ದರ ಹೆಚ್ಚಳವಾಗುತ್ತಿದೆ. ಮೂಲ ಬೆಲೆಗಿಂತಲೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಧಿಸುತ್ತಿರುವ ತೆರಿಗೆಯೇ ಹೆಚ್ಚಾಗಿದೆ. ಪ್ರಧಾನಿಯವರು ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.

ಪೆಟ್ರೋಲ್, ಡೀಸೆಲ್ ಮೇಲೆ ಜಿಎಸ್‍ಟಿ ಹಾಕಿ ಎಂದು ಕಾಂಗ್ರೆಸ್ ಹೇಳಿಲ್ಲ, ತೆರಿಗೆ ಕಡಿಮೆ ಮಾಡಿ ಎಂದು ಒತ್ತಾಯಿಸಿದ್ದೇವೆ. ಇಂಧನದ ಬೆಲೆ ಕಡಿಮೆಯಾದರೆ ಸಾಗಾಣೆ ದರ ಕಡಿಮೆಯಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಯಲಿದೆ. ಸರಕಾರದ ನೆರವು ನಂಬಿ ಕೂತಿದ್ದರೆ ಬಡವರು ಇನ್ನೂ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ನಮ್ಮ ಪಕ್ಷದ ಶಾಸಕರು, ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಸಂಸದರು, ಮುಖಂಡರು ಸಂಕಷ್ಟದ ಸಮಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಜನರ ನೆರವಿಗೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಝಮೀರ್ ಅಹ್ಮದ್ ಖಾನ್, ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮತ್ತಿತರರು ಹಾಜರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago