ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ : ಸಿದ್ದರಾಮಯ್ಯ -Vishwnews24

Featured, ಜಿಲ್ಲೆ, ರಾಜ್ಯ ನ್ಯೂಸ್

ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ಯಾರು ದೃತಿಗೇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕುಂದಗೋಳ ಕ್ಷೇತ್ರದ ಅಭಿನಂದನಾ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲರು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟುಬಿಡಿ. ಇದರಲ್ಲಿ ಯಾವುದೇ ಸಂಶಯ ಬೇಡ. ಕೇಂದ್ರದ ಮಂತ್ರಿ ಪ್ರಹ್ಲಾದ್​ ಜೋಶಿ ಕೊಡುಗೆ ಕುಂದಗೋಳ ಕ್ಷೇತ್ರಕ್ಕೆ ಜೀರೋ. ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲು ಹಲವು ಪ್ರಯತ್ನ ಮಾಡಿತ್ತು. 1 ವೋಟನಿಂದ ಗೆದ್ದರು ಗೆಲುವೆ 1 ಲಕ್ಷ ವೋಟನಿಂದ ಗೆದ್ದರು ಗೆಲುವೆ ಎಂದು ಅವರು ತಿಳಿಸಿದರು.

ಇನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಭಾವನಾತ್ಮಕವಾಗಿ ಮತಚಲಾಯಿಸಿದ್ದಾರೆ.

ಇವಿಎಂ ಮಷಿನ್​ಗಳ ಬಗ್ಗೆ ಗೊಂದಲ ಇರುವುದು ನಿಜ. ಇವಿಎಂ ಮೋಸ ಆಗಿದೆಯೋ ಏನೋ ಗೊತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಂಬರ್ 1 ಆಗಿದೆ ಎಂದು ಅವರು ನುಡಿದರು.

ಸದ್ಯ ಚುನಾವಣೆಯಲ್ಲಿ ಸೋಲು-ಗೆಲುವು ಇರುವುದು ಸಹಜ. ನನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 12 ಸಾವಿರ ಮತಗಳು ಬಿದ್ದರೆ. ಲೋಕಸಭೆ ಚುನಾವಣೆಯಲ್ಲಿ 1 ಲಕ್ಷ 12 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿಗೆ ಬಿದ್ದಿವೆ. 1980ರಲ್ಲಿ ಬಿಜೆಪಿ ಕೇವಲ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈಗ 303 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇದು ಚುನಾವಣೆ ಸೋಲು-ಗೆಲುವು ಸಹಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.