ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ಯಾರು ದೃತಿಗೇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕುಂದಗೋಳ ಕ್ಷೇತ್ರದ ಅಭಿನಂದನಾ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲರು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟುಬಿಡಿ. ಇದರಲ್ಲಿ ಯಾವುದೇ ಸಂಶಯ ಬೇಡ. ಕೇಂದ್ರದ ಮಂತ್ರಿ ಪ್ರಹ್ಲಾದ್ ಜೋಶಿ ಕೊಡುಗೆ ಕುಂದಗೋಳ ಕ್ಷೇತ್ರಕ್ಕೆ ಜೀರೋ. ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲು ಹಲವು ಪ್ರಯತ್ನ ಮಾಡಿತ್ತು. 1 ವೋಟನಿಂದ ಗೆದ್ದರು ಗೆಲುವೆ 1 ಲಕ್ಷ ವೋಟನಿಂದ ಗೆದ್ದರು ಗೆಲುವೆ ಎಂದು ಅವರು ತಿಳಿಸಿದರು.
ಇನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಭಾವನಾತ್ಮಕವಾಗಿ ಮತಚಲಾಯಿಸಿದ್ದಾರೆ.
ಇವಿಎಂ ಮಷಿನ್ಗಳ ಬಗ್ಗೆ ಗೊಂದಲ ಇರುವುದು ನಿಜ. ಇವಿಎಂ ಮೋಸ ಆಗಿದೆಯೋ ಏನೋ ಗೊತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಂಬರ್ 1 ಆಗಿದೆ ಎಂದು ಅವರು ನುಡಿದರು.
ಸದ್ಯ ಚುನಾವಣೆಯಲ್ಲಿ ಸೋಲು-ಗೆಲುವು ಇರುವುದು ಸಹಜ. ನನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 12 ಸಾವಿರ ಮತಗಳು ಬಿದ್ದರೆ. ಲೋಕಸಭೆ ಚುನಾವಣೆಯಲ್ಲಿ 1 ಲಕ್ಷ 12 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿಗೆ ಬಿದ್ದಿವೆ. 1980ರಲ್ಲಿ ಬಿಜೆಪಿ ಕೇವಲ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈಗ 303 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇದು ಚುನಾವಣೆ ಸೋಲು-ಗೆಲುವು ಸಹಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…