Featured

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ : ಸಿದ್ದರಾಮಯ್ಯ -Vishwanews24

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ : ಸಿದ್ದರಾಮಯ್ಯ -Vishwanews24

ಬಾಗಲಕೋಟೆ: ಗ್ರಾಪಂ ಚುನಾವಣೆಗೆ ಇನ್ನೂ ಎಣಿಕೆಯೇ ಮುಗಿದಿರಲಿಲ್ಲ. ಆಗಲೇ ಶೇ 60ರಷ್ಟು ಗ್ರಾಪಂ ಗೆದ್ದಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ
ಮುಖ್ಯಮಂತ್ರಿಯಾಗಿ ಸುಳ್ಳು ಹೇಳಬಾರದು. ಇಡೀ ರಾಜ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರೇ ಗೆದ್ದಿರೋದು ಹೆಚ್ಚು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಗೆದ್ದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾದಾಮಿಯಲ್ಲಿ ಗ್ರಾಮ ಪಂಚಾಯಿತಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದರು.ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷರಾದವರು ಪಂಚಾಯಿತಿ ಯಜಮಾನರಾಗಬೇಕು. ಪಿಡಿಒ ಹಿಂದೆ ಹೋಗ್ಬೇಡಿ. ಪಿಡಿಒ ನಿಮ್ಮ ಹಿಂದೆ ಇರಬೇಕು. ಮಹಿಳಾ ಸದಸ್ಯರ ಬದಲಿಗೆ ಗಂಡರು ದರ್ಬಾರ್ ಮಾಡೋಕೆ ಹೋಗ್ಬೇಡಿ ಎಂದು ಸಲಹೆ ನೀಡಿದರು.

ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಸರಿಯಾಗಿ ಅನುದಾನ ಬರುತ್ತಿಲ್ಲ. ನಾನು ಸುಳ್ಳು ಹೇಳ್ಳುತ್ತಿಲ್ಲ. ಗ್ರಾಮ ಪಂಚಾಯಿತಿಗೆ ಯಡಿಯೂರಪ್ಪ ದು ರೂಪಾಯಿ ಕೊಟ್ಟಿಲ್ಲ. ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಸಿದ್ದಾರೆ‌‌. ಯಡಿಯೂರಪ್ಪ ಅವರಪ್ಪನ ಮನೆಯಿಂದ ಕೊಡುತ್ತಿದ್ದಾರಾ. ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾಯಕವೇ ಕೈಲಾಸ ಎನ್ನುವುದರಲ್ಲಿ ಕಾಂಗ್ರೆಸ್ ನಂಬಿಕೆ ಇಟ್ಟುಕೊಂಡಿದೆ. ನಾನು ಜಾರಿ ಮಾಡಿದ ಯೋಜನೆ ನಿಲ್ಲಿಸಿದ್ದಾರೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಲು ಹೊರಟಿದ್ದಾರೆ. ಮಕ್ಕಳಿಗೆ ಹಾಲು, ಶೂ, ಸಮವಸ್ತ್ರ ಕೊಟ್ಟಿದ್ದು ಬಿಜೆಪಿನಾ? ವಿದ್ಯಾಸಿರಿ,ಕೃಷಿ ಭಾಗ್ಯ ಈಗ ಇದ್ಯಾ? ಸಾಲಮನ್ನಾ ಮಾಡಿದ್ದು ಕಾಂಗ್ರೆಸ್. ಬಿಜೆಪಿ ಸರಕಾರ ಸಾಲಮನ್ನಾ ಮಾಡಿದ್ದು ತೋರಿಸಲಿ. ಬಿಜೆಪಿ ಸರಕಾರ ಮಾನ ಮರ್ಯಾದೆ ಇಲ್ಲದ, ಲಜ್ಜೆಗೆಟ್ಟವರು ಎಂದು ಟೀಕಿಸಿದರು.

ಅಸೆಂಬ್ಲಿಯಲ್ಲಿ ಪ್ರವಾಹದ ಬಗ್ಗೆ ಮೂರು ತಾಸು ಮಾತನಾಡಿದ್ದೇನೆ‌. ಲಜ್ಜೆಗೆಟ್ಟ ಸರಕಾರ. ವಿರೋಧ ಪಕ್ಷದ ನಾಯಕನಾಗಿ ಹೇಳಬಹುದು, ಏನು ಮಾಡೋಕೆ ಆಗುತ್ತೆ. ನಾನು ಮುಖ್ಯಮಂತ್ರಿ ಆಗಿದ್ದಾಗ 1800 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರ ಕೊಟ್ಟೇ. ಬಿಜೆಪಿ ಸರಕಾರದ ರೈತರಿಗೆ ಏನು ಮಾಡಿದೆ. ಹಸಿರು ಶಾಲು ಹಾಕಿ, ನಾನು ರೈತನ ಮಗ ಅಂತಾರೆ. ನಾವ್ಯಾರ ಮಕ್ಕಳು ಎಂದು ಸಿದ್ದರಾಮಯ್ಯ ಗುಡುಗಿದರು.

http://ರಾಜ್ಯದ ಬಿಜೆಪಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆಳೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಇಡೀ ವರ್ಷ ಹೋರಾಟ ನಡೆಸಲಾಗುವುದು : ಡಿ.ಕೆ.ಶಿವಕುಮಾರ್ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

21 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

21 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago