Featured

ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಿ ಮುಸಲ್ಮಾನರ ತಂಟೆಗೆ ಯಾರು ಬರುತ್ತಾರೆ ನೋಡೋಣ : ಎಚ್‌.ಡಿ.ಕುಮಾರಸ್ವಾಮಿ – Vishwanews24

ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಿ ಮುಸಲ್ಮಾನರ ತಂಟೆಗೆ ಯಾರು ಬರುತ್ತಾರೆ ನೋಡೋಣ : ಎಚ್‌.ಡಿ.ಕುಮಾರಸ್ವಾಮಿ

ಬಾಳೆಹೊನ್ನೂರು : ರಾಜ್ಯದಲ್ಲಿ ಅಧಿಕಾರ ನಡೆಸಿದ ರಾಷ್ಟ್ರೀಯ ಪಕ್ಷಗಳು ಮುಸಲ್ಮಾನರನ್ನು ನೆಮ್ಮದಿಯಾಗಿ ಇರಲು ಬಿಟ್ಟಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಿ. ನಿಮ್ಮ ತಂಟೆಗೆ ಯಾರು ಬರುತ್ತಾರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಜೇಸಿ ವೃತ್ತದಲ್ಲಿ ಜೆಡಿಎಸ್‌ ಭಾನುವಾರ ಆಯೋಜಿಸಿದ್ದ ಪಂಚರತ್ನ ರಥ ಯಾತ್ರೆ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಇಂದು ರಾಜ್ಯವನ್ನು ಕಟ್ಟಬೇಕಾಗಿರುವುದು ರಕ್ತದ ಓಕುಳಿ ಆಡಲು, ಬಡವರ ಬದುಕಿನ ಜೊತೆ ಚೆಲ್ಲಾಟ ಆಡಲು ಅಲ್ಲ. ಜನಸಾಮಾನ್ಯರ ಬದುಕು ಕಟ್ಟಲು ಎಂದರು.

ರಾಜ್ಯದ ಹಲವಾರು ಹಳ್ಳಿಗಳಲ್ಲಿ ರೈತರ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಯಾರೂ ಕೇಳದಂತಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷ ಪಂಚರತ್ನ ಯಾತ್ರೆ ಆಯೋಜಿಸಿದೆ. ಈ ಯೋಜನೆ ಮಾಡಲು ಯಾವುದೇ ಆರ್ಥಿಕ ತಜ್ಞರು ಹೇಳಿಲ್ಲ. ರಾಜ್ಯದ ರೈತರು, ಮಹಿಳೆಯರು, ಯುವಜನರ ಸದುದ್ದೇಶದ ಕಾರಣ ಯೋಜನೆ ಆಯೋಜಿಸಿದೆ ಎಂದು ಹೇಳಿದರು. ಜೆಡಿಎಸ್‌ ಪಕ್ಷಕ್ಕೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಅವಕಾಶ ನೀಡಿದರೆ ಯಾವುದೇ ಧರ್ಮ, ಜಾತಿಯ ಸೋಂಕಿಲ್ಲದೆ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು. ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾಕ್ಕೆ ಎರಡೂ ರಾಷ್ಟ್ರೀಯ ಪಕ್ಷಗಳು ವಿರೋಧಿಸಿದ್ದವು ಎಂದರು.

ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಒತ್ತುವರಿ, ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ, ಕಸ್ತೂರಿ ರಂಗನ್‌ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲಾಗುವುದು. 6 ತಿಂಗಳಲ್ಲಿ ಎಲೆಚುಕ್ಕಿ ರೋಗಕ್ಕೆ ಔಷಧಿ ಕಂಡು ಹಿಡಿಯಲಾಗುವುದು. ಇಲ್ಲದಿದ್ದರೆ ರೈತರ ಜೀವನ ಉಳಿಯಲ್ಲ. ಅಡಕೆ ಬೆಳೆಗಾರರ ಜೀವನ ಉಳಿಯಬೇಕು ಎಂಬುದು ನಮ್ಮ ಉದ್ದೇಶ. ಕೇಂದ್ರ ಸರ್ಕಾರವು ರೈತರ ಮೇಲೆ ಪ್ರಹಾರ ಮಾಡಲು ಹೊರಟಿದ್ದು, ಭೂತಾನ್‌ನಿಂದ ಅಡಕೆ ಆಮದಿಗೆ ಅವಕಾಶ ನೀಡಿದ್ದಾರೆ. ರೈತ ವಿರೋಧಿ ಸಾಹುಕಾರ ಯಾವುದಾದರೂ ಇದ್ದರೆ ಅದು ಬಿಜೆಪಿ ಮಾತ್ರ ಎಂದರು.

ಈ ಸಂದರ್ಭದಲ್ಲಿ ಶೃಂಗೇರಿ ಜೆಡಿಎಸ್‌ ನಿಯೋಜಿತ ಅಭ್ಯರ್ಥಿ ಸುಧಾಕರ್‌ ಎಸ್‌.ಶೆಟ್ಟಿ, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ, ಮುಖಂಡರಾದ ಕೆ.ಎನ್‌.ಮರಿಗೌಡ ಕೊಳಲೆ, ಕೆ.ಆರ್‌.ದೀಪಕ್‌, ಕೆ.ಟಿ.ಗೋವಿಂದೇಗೌಡ, ಗೋವಿಂದರಾಜು, ಕೆ.ಸಿ.ವೆಂಕಟೇಶ್‌, ಉದಯ್‌ ಸುವರ್ಣ, ಕುಂಚೂರು ವಾಸು, ಅನಿಲ್‌ ನಾರ್ವೆ, ಶಿವಶಂಕರ್‌ ಇದ್ದರು.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

21 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

21 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

22 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

22 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

2 days ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago