Featured

ಮುಂದಿನ ಚುನಾವಣೆಯಲ್ಲಿ ಬಹುಮತ ನೀಡಿದರೆ ರಾಜ್ಯವನ್ನು ನಂಬರ್‌ ಒನ್ ಮಾಡುತ್ತೇನೆ, ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿ ಕೆ

ಬೆಂಗಳೂರು:  ಮುಂದಿನ ಚುನಾವಣೆಯಲ್ಲಾದರೂ  ನಾಡಿನ ಜನತೆ ಐದು ವರ್ಷಗಳ ಕಾಲ ಜೆಡಿಎಸ್ ಪಕ್ಷಕ್ಕೆ ಆಡಳಿತ ನಡೆಸಲು ಸ್ವಂತ ಶಕ್ತಿ ಕೊಡಬೇಕು. ಬಹುಮತ ನೀಡಿದರೆ ದೇಶದಲ್ಲಿಯೇ ರಾಜ್ಯವನ್ನು ನಂಬರ್‌ ಒನ್‌ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜೆಡಿಎಸ್‌ ಪಕ್ಷದ ಕಚೇರಿಗೆ ಬೀಗ ಹಾಕಿ ಕಟ್ಟಡವನ್ನು ನೆಲಸಮ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಕುರಿತಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಎಲ್ಲಾ ಟೀಕೆಗೆ ಉತ್ತರ ಕೊಡಲು ಮುಂದಾಗಿದ್ದು ಫೆಬ್ರವರಿ 8ರಂದು ಮಂಡಿಸಲಿರುವ ಬಜೆಟ್ ನಲ್ಲಿ ಬ್ಯಾಂಕುಗಳಿಗೆ ಪಾವತಿಸಬೇಕಾದ ಸಾಲದ ಮೊತ್ತವನ್ನು ನಾಲ್ಕು ಕಂತುಗಳ ಬದಲಾಗಿ ಒಂದೇ ಕಂತಿನಲ್ಲಿ ಪಾವತಿಸುವ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಫೆ.8ರಂದು ಬಜೆಟ್‌ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್‌ ಘೋಷಣೆ ವೇಳೆ ಸಾಲಮನ್ನಾ ಯೋಜನೆಯ ಸಂಪೂರ್ಣ ಮೊತ್ತ 46 ಸಾವಿರ ಕೋಟಿ ರು.ಗಳನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು. ರೈತರಲ್ಲಿ ಅವಿಶ್ವಾಸ ಮೂಡಿಸುವ ಪ್ರತಿಪಕ್ಷಗಳ ಹುನ್ನಾರಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು..

 

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

19 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

52 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago