Featured

ಮುಂದಿನ ಚುನಾವಣೆಯಲ್ಲಿ ಬಹುಮತ ನೀಡಿದರೆ ರಾಜ್ಯವನ್ನು ನಂಬರ್‌ ಒನ್ ಮಾಡುತ್ತೇನೆ, ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿ ಕೆ

ಬೆಂಗಳೂರು:  ಮುಂದಿನ ಚುನಾವಣೆಯಲ್ಲಾದರೂ  ನಾಡಿನ ಜನತೆ ಐದು ವರ್ಷಗಳ ಕಾಲ ಜೆಡಿಎಸ್ ಪಕ್ಷಕ್ಕೆ ಆಡಳಿತ ನಡೆಸಲು ಸ್ವಂತ ಶಕ್ತಿ ಕೊಡಬೇಕು. ಬಹುಮತ ನೀಡಿದರೆ ದೇಶದಲ್ಲಿಯೇ ರಾಜ್ಯವನ್ನು ನಂಬರ್‌ ಒನ್‌ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜೆಡಿಎಸ್‌ ಪಕ್ಷದ ಕಚೇರಿಗೆ ಬೀಗ ಹಾಕಿ ಕಟ್ಟಡವನ್ನು ನೆಲಸಮ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಕುರಿತಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಎಲ್ಲಾ ಟೀಕೆಗೆ ಉತ್ತರ ಕೊಡಲು ಮುಂದಾಗಿದ್ದು ಫೆಬ್ರವರಿ 8ರಂದು ಮಂಡಿಸಲಿರುವ ಬಜೆಟ್ ನಲ್ಲಿ ಬ್ಯಾಂಕುಗಳಿಗೆ ಪಾವತಿಸಬೇಕಾದ ಸಾಲದ ಮೊತ್ತವನ್ನು ನಾಲ್ಕು ಕಂತುಗಳ ಬದಲಾಗಿ ಒಂದೇ ಕಂತಿನಲ್ಲಿ ಪಾವತಿಸುವ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಫೆ.8ರಂದು ಬಜೆಟ್‌ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್‌ ಘೋಷಣೆ ವೇಳೆ ಸಾಲಮನ್ನಾ ಯೋಜನೆಯ ಸಂಪೂರ್ಣ ಮೊತ್ತ 46 ಸಾವಿರ ಕೋಟಿ ರು.ಗಳನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು. ರೈತರಲ್ಲಿ ಅವಿಶ್ವಾಸ ಮೂಡಿಸುವ ಪ್ರತಿಪಕ್ಷಗಳ ಹುನ್ನಾರಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು..

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago