Featured

ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ – vishwanews24

ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ  ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಇಷ್ಟು ಸಮಯ ಮಹಿಳೆಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ.

ಗೃಹಲಕ್ಷ್ಮಿ ಹಣಕ್ಕೆ ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ತೃತೀಯ ಲಿಂಗಿಗಳಿಗೆ ಹಣ ನೀಡಲು ಆದೇಶಿಸಿದ್ದು, ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಬಳಸಿ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಖಾತೆಗೆ 2,000 ರೂಪಾಯಿ ಹಣ ಜಮೆ ಆಗಲಿದೆ.

ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ 1.25 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.24 ಕೋಟಿ ಮಂದಿಯ ಖಾತೆಗೆ 2 ಸಾವಿರ ರೂಪಾಯಿ ಹಣ ಜಮೆಯಾಗುತ್ತಿದೆ. 1.5 ಲಕ್ಷ ಮಂದಿ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಪಾವತಿ ದಾರರಾಗಿದ್ದು ಅವರಿಗೆ ಹಣ ಸಂದಾಯ ಸ್ಥಗಿತಗೊಳಿಸಲಾಗಿದೆ. ಫಲಾನುಭವಿಗಳ ಖಾತೆಗೆ ಈವರೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಣ ವರ್ವಗಾವಣೆಯಾಗಬೇಕಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago