ಕೊಪ್ಪಳ: ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಜಿಲ್ಲೆಯ ಇರಕಲ್ಲಗಡಾ ಗ್ರಾಮದಲ್ಲಿ ಮಾತನಾಡಿದ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಇದು ಪ್ರಧಾನಿ ಮೋದಿ ಅವರ ಜನಪ್ರಿಯತೆ ತೋರಿಸುತ್ತದೆ. ಬರುವ ದಿನದಲ್ಲಿ ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ. ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯವಾಗಿದೆ. ನಮ್ಮ ರಾಜ್ಯದಲ್ಲಿ ಗ್ಯಾರಂಟಿ ಸುಳ್ಳಿನ ಸರಮಾಲೆ ಮೇಲೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ ಸೇರಿ ದೇಶದಲ್ಲಿ ಶೂನ್ಯವಾಗಲಿದೆ ಎಂದು ಹೇಳಿದರು.
ಇದೇ ವೇಳೆ ರಾಜ್ಯ ಬಿಜೆಪಿಯಲ್ಲಿ ಒಳಜಗಳ ವಿಚಾರವಾಗಿ ಮಾತನಾಡಿ, ಪಕ್ಷದ ಹಿರಿಯರು ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ. ಎಲ್ಲಾ ವಿಚಾರಗಳು ಶೀಘ್ರದಲ್ಲಿಯೇ ಬಗೆಹರಿಯುತ್ತವೆ. ಪಕ್ಷದ ವರಿಷ್ಟರು ಒಳ್ಳೆಯ ತೀರ್ಮಾನ ಮಾಡುತ್ತಾರೆ. ದೆಹಲಿಯ ಚುನಾವಣೆ ಇದೀಗ ಮುಗಿದಿದೆ. ಕೆಲವೇ ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಇನ್ನೂ ಅವಕಾಶ ಸಿಕ್ಕರೆ ನಾನು ರಾಜ್ಯಾದ್ಯಕ್ಷ ಆಗ್ತೇನೆ ಎನ್ನುವ ರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪಕ್ಷದ ಹಿರಿಯರು ತೀರ್ಮಾನ ಮಾಡಬೇಕು. ಮುಡಾ ವಿಚಾರದಲ್ಲಿ ಇಡಿ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಈಗಾಗಲೇ ಅವರು ವಿಜಯೋತ್ಸವ ಆಚರಣೆ ಮಾಡುವ ಅವಶ್ಯಕತೆ ಇಲ್ಲ. ಇಡಿ ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಒಬ್ಬರೇ ಜೈಲಿಗೆ ಹೋಗುತ್ತಾರೋ ಅಥವಾ ಎಷ್ಟು ಜನ ಹೋಗುತ್ತಾರೋ ಎನ್ನುವ ಕುರಿತು ಮುಂದಿನ ದಿನದಲ್ಲಿ ಗೊತ್ತಾಗಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…