ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ ಕಿತ್ತೆಸೆಯುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋಲು ಅನುಭವಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಕಾಳಿಘಾಟ್ ನ ತಮ್ಮ ನಿವಾಸದಲ್ಲಿ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ದೆಹಲಿಯಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗುವುದು” ಎಂದು ಹೇಳಿದರು. ಇತ್ತೀಚೆಗೆ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗೆದ್ದು 15 ವರ್ಷಗಳ ಟಿಎಂಸಿ ಆಳ್ವಿಕೆಯನ್ನು ಬಿಜೆಪಿ ಕೊನೆಗೊಳಿಸಿತ್ತು. ಟಿಎಂಸಿ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು.
ಚುನಾವಣಾ ಹಿನ್ನಡೆಯ ಹೊರತಾಗಿಯೂ ಪಕ್ಷ ಬಿಜೆಪಿ ವಿರುದ್ಧ ರಾಜಕೀಯ ಹೋರಾಟ ಮುಂದುವರಿಸುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನುಡಿದರು. “ಅವರು ಏನು ಬೇಕೋ ಮಾಡಲಿ; ನಮ್ಮ ಮನೆಯನ್ನು ಧ್ವಂಸಗೊಳಿಸಲಿ, ನೋಟಿಸ್ ನೀಡಲಿ.. ಇವುಗಳಿಗೆ ನಾನು ಮಣಿಯುವುದಿಲ್ಲ. ಏನೇ ಬರಲಿ, ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…