ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ ನಗರದ ಪಿವಿಎಸ್ ಕಚೇರಿ ಮುಂಭಾಗ ಗೋಪೂಜೆ ನಡೆಸಿ ಹರ್ಷ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಿರೀಕ್ಷೆಯಂತೆ ಗೋಹತ್ಯೆ ನಿಷೇಧ ಮಸೂದೆ ಜಾರಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೆ ಬರಲಿದೆ. ಗೋಹತ್ಯೆ ನಿಷೇಧ ಮಂಡನೆ ವಿರುದ್ಧ ಕಾಂಗ್ರೆಸ್ ಬೆಂಬಲಿಸದಿರುವುದು ನಿರೀಕ್ಷಿತ. ವಿಧಾನಸಭೆಯಂತೆ ವಿಧಾನ ಪರಿಷತ್ ನಲ್ಲೂ ಮಸೂದೆ ಅಂಗೀಕಾರವಾಗಲಿದೆ.
ಈ ಹಿಂದೆ ಯಡಿಯೂರಪ್ಪನವರು ಜಾರಿಗೆ ತಂದ ಮಸೂದೆ ವಾಪಸ್ ಪಡೆಯುವಾಗ ಚರ್ಚಿಸದೇ ಹೋದ ಕಾಂಗ್ರೆಸ್ ಈಗ ಚರ್ಚೆ ನಡೆಸದೇ ಮಸೂದೆ ಮಂಡಿಸಲಾಗಿದೆ ಅನ್ನೋದರಲ್ಲಿ ಅರ್ಥವೇ ಇಲ್ಲ ಎಂದರು.ಅಲ್ಲದೇ ರೈತರ ಹೋರಾಟದ ಹಿಂದೆಯೂ ರಾಜಕೀಯವಿದ್ದು, ಅದನ್ನು ಮುನ್ನಡೆಸುವವರನ್ನು ನೋಡಿದ್ರೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮನೋಹರ್ ಕದ್ರಿ, ಶಶಿಕಲಾ ಕಾವ, ವೀಣಾ ಮಂಗಲ, ಸತೀಶ್ ಕುಂಪಲ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…