ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ ನಗರದ ಪಿವಿಎಸ್ ಕಚೇರಿ ಮುಂಭಾಗ ಗೋಪೂಜೆ ನಡೆಸಿ ಹರ್ಷ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಿರೀಕ್ಷೆಯಂತೆ ಗೋಹತ್ಯೆ ನಿಷೇಧ ಮಸೂದೆ ಜಾರಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೆ ಬರಲಿದೆ. ಗೋಹತ್ಯೆ ನಿಷೇಧ ಮಂಡನೆ ವಿರುದ್ಧ ಕಾಂಗ್ರೆಸ್ ಬೆಂಬಲಿಸದಿರುವುದು ನಿರೀಕ್ಷಿತ. ವಿಧಾನಸಭೆಯಂತೆ ವಿಧಾನ ಪರಿಷತ್ ನಲ್ಲೂ ಮಸೂದೆ ಅಂಗೀಕಾರವಾಗಲಿದೆ.
ಈ ಹಿಂದೆ ಯಡಿಯೂರಪ್ಪನವರು ಜಾರಿಗೆ ತಂದ ಮಸೂದೆ ವಾಪಸ್ ಪಡೆಯುವಾಗ ಚರ್ಚಿಸದೇ ಹೋದ ಕಾಂಗ್ರೆಸ್ ಈಗ ಚರ್ಚೆ ನಡೆಸದೇ ಮಸೂದೆ ಮಂಡಿಸಲಾಗಿದೆ ಅನ್ನೋದರಲ್ಲಿ ಅರ್ಥವೇ ಇಲ್ಲ ಎಂದರು.ಅಲ್ಲದೇ ರೈತರ ಹೋರಾಟದ ಹಿಂದೆಯೂ ರಾಜಕೀಯವಿದ್ದು, ಅದನ್ನು ಮುನ್ನಡೆಸುವವರನ್ನು ನೋಡಿದ್ರೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮನೋಹರ್ ಕದ್ರಿ, ಶಶಿಕಲಾ ಕಾವ, ವೀಣಾ ಮಂಗಲ, ಸತೀಶ್ ಕುಂಪಲ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…