ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ ನಗರದ ಪಿವಿಎಸ್ ಕಚೇರಿ ಮುಂಭಾಗ ಗೋಪೂಜೆ ನಡೆಸಿ ಹರ್ಷ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಿರೀಕ್ಷೆಯಂತೆ ಗೋಹತ್ಯೆ ನಿಷೇಧ ಮಸೂದೆ ಜಾರಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೆ ಬರಲಿದೆ. ಗೋಹತ್ಯೆ ನಿಷೇಧ ಮಂಡನೆ ವಿರುದ್ಧ ಕಾಂಗ್ರೆಸ್ ಬೆಂಬಲಿಸದಿರುವುದು ನಿರೀಕ್ಷಿತ. ವಿಧಾನಸಭೆಯಂತೆ ವಿಧಾನ ಪರಿಷತ್ ನಲ್ಲೂ ಮಸೂದೆ ಅಂಗೀಕಾರವಾಗಲಿದೆ.
ಈ ಹಿಂದೆ ಯಡಿಯೂರಪ್ಪನವರು ಜಾರಿಗೆ ತಂದ ಮಸೂದೆ ವಾಪಸ್ ಪಡೆಯುವಾಗ ಚರ್ಚಿಸದೇ ಹೋದ ಕಾಂಗ್ರೆಸ್ ಈಗ ಚರ್ಚೆ ನಡೆಸದೇ ಮಸೂದೆ ಮಂಡಿಸಲಾಗಿದೆ ಅನ್ನೋದರಲ್ಲಿ ಅರ್ಥವೇ ಇಲ್ಲ ಎಂದರು.ಅಲ್ಲದೇ ರೈತರ ಹೋರಾಟದ ಹಿಂದೆಯೂ ರಾಜಕೀಯವಿದ್ದು, ಅದನ್ನು ಮುನ್ನಡೆಸುವವರನ್ನು ನೋಡಿದ್ರೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮನೋಹರ್ ಕದ್ರಿ, ಶಶಿಕಲಾ ಕಾವ, ವೀಣಾ ಮಂಗಲ, ಸತೀಶ್ ಕುಂಪಲ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…