ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ ನಗರದ ಪಿವಿಎಸ್ ಕಚೇರಿ ಮುಂಭಾಗ ಗೋಪೂಜೆ ನಡೆಸಿ ಹರ್ಷ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಿರೀಕ್ಷೆಯಂತೆ ಗೋಹತ್ಯೆ ನಿಷೇಧ ಮಸೂದೆ ಜಾರಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೆ ಬರಲಿದೆ. ಗೋಹತ್ಯೆ ನಿಷೇಧ ಮಂಡನೆ ವಿರುದ್ಧ ಕಾಂಗ್ರೆಸ್ ಬೆಂಬಲಿಸದಿರುವುದು ನಿರೀಕ್ಷಿತ. ವಿಧಾನಸಭೆಯಂತೆ ವಿಧಾನ ಪರಿಷತ್ ನಲ್ಲೂ ಮಸೂದೆ ಅಂಗೀಕಾರವಾಗಲಿದೆ.
ಈ ಹಿಂದೆ ಯಡಿಯೂರಪ್ಪನವರು ಜಾರಿಗೆ ತಂದ ಮಸೂದೆ ವಾಪಸ್ ಪಡೆಯುವಾಗ ಚರ್ಚಿಸದೇ ಹೋದ ಕಾಂಗ್ರೆಸ್ ಈಗ ಚರ್ಚೆ ನಡೆಸದೇ ಮಸೂದೆ ಮಂಡಿಸಲಾಗಿದೆ ಅನ್ನೋದರಲ್ಲಿ ಅರ್ಥವೇ ಇಲ್ಲ ಎಂದರು.ಅಲ್ಲದೇ ರೈತರ ಹೋರಾಟದ ಹಿಂದೆಯೂ ರಾಜಕೀಯವಿದ್ದು, ಅದನ್ನು ಮುನ್ನಡೆಸುವವರನ್ನು ನೋಡಿದ್ರೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮನೋಹರ್ ಕದ್ರಿ, ಶಶಿಕಲಾ ಕಾವ, ವೀಣಾ ಮಂಗಲ, ಸತೀಶ್ ಕುಂಪಲ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…