ದಾವಣಗೆರೆ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಭಾರತಕ್ಕೆ ಮುಂದಿನ ಪ್ರಧಾನಿಯಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದರು ಅಚ್ಚರಿ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ಎದುರಿಸುವ ತಾಕತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದು, ರಾಹುಲ್ ಗಾಂಧಿಯಿಂದ ಮೋದಿಯನ್ನು ಎದುರಿಸಲು ಆಗುವುದಿಲ್ಲ. ಅದು ಕೇವಲ ಖರ್ಗೆಯ ಅವರಿಂದ ಮಾತ್ರ ಸಾಧ್ಯ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ಲ. ಕಾಂಗ್ರೆಸ್ ಹಿರಿಯ ನಾಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ. ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಅಷ್ಟೇ ಅಲ್ಲ. ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ಮುಂದೆ ಅವರು ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊದಲ ದಲಿತ ಮುಖಂಡ , ದಿ. ಬಸವಲಿಂಗಪ್ಪ, ದಿವಂಗತ ಕೆ. ಎಚ್ , ರಂಗನಾಥ್, ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇದ್ದರೂ ಅವರು ಮುಖ್ಯಮಂತ್ರಿ ಆಗಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅಲ್ಲ, ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…