Featured

ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಮೂಡುಬಿದಿರೆ: ರಾಜ್ಯದಲ್ಲಿ ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಆ ಬಳಿಕದ ಚುನಾವಣೆಯಲ್ಲೂ ಯಡಿಯೂರಪ್ಪ ಅವರ ಜತೆ ಸಂಘಟನಾ ಕಾರ್ಯದಲ್ಲಿ ತೊಡಗಿಕೊಂಡು ಬಿಜೆಪಿ 150 ಕ್ಕೂ ಮಿಕ್ಕಿದ ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬೆಳಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮೂಲ್ಕಿ ಮೂಡುಬಿದಿರೆ ಬಿಜೆಪಿ ಮಂಡಲದ ವತಿಯಿಂದ ತನಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷಾಧ್ಯಕ್ಷನಾಗಿ ರಾಜ್ಯ ಪ್ರವಾಸ ಪೂರ್ಣಗೊಳಿಸಿದಾಗ ರಾಜ್ಯದಲ್ಲಿ ಸಂಘಟನಾಶಕ್ತಿ ಬೆಳೆದಿರುವುದು ಪ್ರಧಾನಿ ಮೋದಿಯವರ ಮೇಲಿನ ನಂಬಿಕೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ವಿಶ್ವಾಸವನ್ನು ಕಂಡಿದ್ದೇನೆ. ಹುಟ್ಟೂರಿನಲ್ಲಿ ದೊರೆತ ಪ್ರೀತಿಯ ಗೌರವ ಸ್ಮರಣೀಯ ಎಂದ ಅವರು ರಾಜ್ಯದಲ್ಲಿ ಯಡಿಯೂರಪ್ಪ ಕಾಮಧೇನುವಾದರೆ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಕಲ್ಪವೃಕ್ಷದಂತೆ ಅಭಿವೃದ್ಧಿಗೆ ಕೊಡುಗೆ ಸಲ್ಲಿಸಲಿ ಎಂದು ಹಾರೈಸಿದರು.

ಜಿಲ್ಲಾ ಕಾರ್ಯದರ್ಶಿ ಸುದರ್ಶನ ಎಂ,ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಸುಚರಿತ ಶೆಟ್ಟಿ, ಕೆ.ಪಿ.ಸುಜಾತ, ವಿನೋದ್ ಬೆಳ್ಳೂರು, ವಸಂತಿ ಕಿಶೋರ್, ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಭುವನಾಭಿರಾಮ ಉಡುಪ, ರಮಾನಾಥ ಅತ್ತಾರ್, ಜಾಯ್ಲಸ್ ಡಿ ಸೋಜಾ, ಶೈಲೇಂದ್ರ ಸಸಿಹಿತ್ಲು, ರಾಜೇಶ್ ಮಲ್ಯ, ಕೆ.ಆರ್. ಪಂಡಿತ್, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಮೇಘನಾಥ ಶೆಟ್ಟಿ, ಎಂ.ಎಸ್. ಕೋಟ್ಯಾನ್, ಮತ್ತಿತರರು ಉಪಸ್ಥಿತರಿದ್ದರು.

ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಸ್ವಾಗತಿಸಿದರು. ಕಾರ್ಯದರ್ಶಿ ಸುಕೇಶ್ ಶೆಟ್ಟಿ ವಂದಿಸಿದರು. ಬೆಳುವಾಯಿ ಭಾಸ್ಕರ ಆಚಾರ್ಯ, ಜಯಂತ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago