Featured

ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಮೂಡುಬಿದಿರೆ: ರಾಜ್ಯದಲ್ಲಿ ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಆ ಬಳಿಕದ ಚುನಾವಣೆಯಲ್ಲೂ ಯಡಿಯೂರಪ್ಪ ಅವರ ಜತೆ ಸಂಘಟನಾ ಕಾರ್ಯದಲ್ಲಿ ತೊಡಗಿಕೊಂಡು ಬಿಜೆಪಿ 150 ಕ್ಕೂ ಮಿಕ್ಕಿದ ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬೆಳಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮೂಲ್ಕಿ ಮೂಡುಬಿದಿರೆ ಬಿಜೆಪಿ ಮಂಡಲದ ವತಿಯಿಂದ ತನಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷಾಧ್ಯಕ್ಷನಾಗಿ ರಾಜ್ಯ ಪ್ರವಾಸ ಪೂರ್ಣಗೊಳಿಸಿದಾಗ ರಾಜ್ಯದಲ್ಲಿ ಸಂಘಟನಾಶಕ್ತಿ ಬೆಳೆದಿರುವುದು ಪ್ರಧಾನಿ ಮೋದಿಯವರ ಮೇಲಿನ ನಂಬಿಕೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ವಿಶ್ವಾಸವನ್ನು ಕಂಡಿದ್ದೇನೆ. ಹುಟ್ಟೂರಿನಲ್ಲಿ ದೊರೆತ ಪ್ರೀತಿಯ ಗೌರವ ಸ್ಮರಣೀಯ ಎಂದ ಅವರು ರಾಜ್ಯದಲ್ಲಿ ಯಡಿಯೂರಪ್ಪ ಕಾಮಧೇನುವಾದರೆ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಕಲ್ಪವೃಕ್ಷದಂತೆ ಅಭಿವೃದ್ಧಿಗೆ ಕೊಡುಗೆ ಸಲ್ಲಿಸಲಿ ಎಂದು ಹಾರೈಸಿದರು.

ಜಿಲ್ಲಾ ಕಾರ್ಯದರ್ಶಿ ಸುದರ್ಶನ ಎಂ,ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಸುಚರಿತ ಶೆಟ್ಟಿ, ಕೆ.ಪಿ.ಸುಜಾತ, ವಿನೋದ್ ಬೆಳ್ಳೂರು, ವಸಂತಿ ಕಿಶೋರ್, ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಭುವನಾಭಿರಾಮ ಉಡುಪ, ರಮಾನಾಥ ಅತ್ತಾರ್, ಜಾಯ್ಲಸ್ ಡಿ ಸೋಜಾ, ಶೈಲೇಂದ್ರ ಸಸಿಹಿತ್ಲು, ರಾಜೇಶ್ ಮಲ್ಯ, ಕೆ.ಆರ್. ಪಂಡಿತ್, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಮೇಘನಾಥ ಶೆಟ್ಟಿ, ಎಂ.ಎಸ್. ಕೋಟ್ಯಾನ್, ಮತ್ತಿತರರು ಉಪಸ್ಥಿತರಿದ್ದರು.

ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಸ್ವಾಗತಿಸಿದರು. ಕಾರ್ಯದರ್ಶಿ ಸುಕೇಶ್ ಶೆಟ್ಟಿ ವಂದಿಸಿದರು. ಬೆಳುವಾಯಿ ಭಾಸ್ಕರ ಆಚಾರ್ಯ, ಜಯಂತ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

44 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago