Featured

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯೆ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

4 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

5 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago