ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು.
ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು.
ಸಿಎಂ ಸಿದ್ಧರಾಮಯ್ಯ ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…