Featured

ಮುಂದಿನ ವರ್ಷ ನೀವು 2020ನೇ ಇಸವಿ ಬರೆಯುವ ಮುನ್ನ ಎಚ್ಚರ !! Vishwanews24

ಬೆಂಗಳೂರು: ಇನ್ನೆರಡು ದಿನದಲ್ಲಿ 2019ನೇ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ಯಾಕೆಂದರೆ ನೀವು ಈ ವರ್ಷ ಬರೆಯುವ ದಿನಾಂಕದಲ್ಲಿ ಸ್ವಲ್ಪ ಯಾಮಾರಿದರೂ ವಂಚಕರಿಗೆ ಹಬ್ಬವಾಗಿ ಪರಿಣಮಿಸಬಹುದು.

ಬ್ಯಾಂಕಿನ ವ್ಯವಹಾರ ಅಥವಾ ಪ್ರಮುಖ ದಾಖಲೆ ಪತ್ರಗಳಲ್ಲಿ ಸಹಿ ಹಾಕುವ ಸಂದರ್ಭ ಎಲ್ಲರೂ ಹೆಚ್ಚಾಗಿ ಅಂದಿನ ದಿನಾಂಕ ಬರೆಯುವುದು ಸಹಜ ಮತ್ತು ಕೆಲವೊಮ್ಮೆ ಅನಿವಾರ್ಯ ಕೂಡಾ. ಈ ವೇಳೆ ಅನೇಕರು ಮಾಡುವ ಸಾಮಾನ್ಯ ವಾಗಿ ವರ್ಷವನ್ನು ಶಾರ್ಟ್ ಕಟ್‌ನಲ್ಲಿ ಬರೆಯುತ್ತಾರೆ. ಉದಾಹರಣೆಗೆ 28/12/2019ರ ದಿನಾಂಕವನ್ನು 28/12/19 ಎಂದು ಬರೆಯುತ್ತಾರೆ. ಆದರೆ ಇನ್ಮುಂದೆ ಈ ಅಭ್ಯಾಸ ಬದಲಾಯಿಸುವುದು ಓಳಿತು. ಯಾಕೆಂದರೆ 2020ರ ವರ್ಷವನ್ನು 20 ಎಂದು ಶಾರ್ಟ್‌ಕರ್ಟ್‌ ಬರೆದರೆ ತೊಂದರೆಗೆ ಸಿಲುಕಬಹುದು.

2020ರಲ್ಲಿ ದಿನಾಂಕವನ್ನು ಉದಾಹರಣೆಗೆ, 31.01.2020 ಎಂದು ಪೂರ್ಣವಾಗಿ ಬರೆಯಬೇಕು. 31.01.20 ಎಂದು ಬರೆಯಬಾರದು.

ಯಾಕೆಂದರೆ ಒಂದುವೇಳೆ ನೀವು 01-01-20 ಎಂದು ಬರೆದಿರಿ ಎಂದಿಟ್ಟುಕೊಳ್ಳಿ ಆವಾಗ 20ರ ಎದುರು ಯಾವ ಇಸವಿಯನ್ನಾದರೂ ನಮೂದಿಸಲು ಸಾಧ್ಯವಿರುತ್ತದೆ. 01-01-20ನ್ನು ತಿದ್ದಿ 2000 ನೇ ಇಸವಿಯಿಂದ 2019ರವರೆಗೆ ಅಥವಾ 2020ರಿಂದ 2099ರವರೆಗೆ ಯಾವ ಇಸವಿಯನ್ನು ಬೇಕಾದರೂ ಬರೆದುಕೊಳ್ಳಲು ಅವಕಾಶವಿರುತ್ತದೆ. ಆದ್ದರಿಂದ 2020 ನ್ನು ಪೂರ್ಣವಾಗಿ ನಮೂದಿಸಿದರೆ ಸುರಕ್ಷಿತವಾಗಿರಬಹುದು..

ಹಾಗಾಗಿ ಚೆಕ್ ಗಳಲ್ಲಿ, ಒಪ್ಪಂದ ಪತ್ರಗಳಲ್ಲಿ ಅಥವಾ ಇನ್ಯಾವುದೇ ಪ್ರಮುಖ ದಾಖಲೆಗಳಲ್ಲಿ ಮುಂದಿನ ವರ್ಷ ಇಸವಿ ಬರೆಯುವಾಗ ಎಚ್ಚರಿಕೆಯಿಂದಿರಿ ಮತ್ತು ಪೂರ್ಣ ಇಸವಿಯನ್ನು ಬರೆಯುವುದು ಕಾನೂನು ಸಹಿತ ಎಲ್ಲಾ ದೃಷ್ಟಿಯಿಂದಲೂ ಸುರಕ್ಷಿತ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago