Featured

ಮುಂದಿನ ವರ್ಷ ನೀವು 2020ನೇ ಇಸವಿ ಬರೆಯುವ ಮುನ್ನ ಎಚ್ಚರ !! Vishwanews24

ಬೆಂಗಳೂರು: ಇನ್ನೆರಡು ದಿನದಲ್ಲಿ 2019ನೇ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ಯಾಕೆಂದರೆ ನೀವು ಈ ವರ್ಷ ಬರೆಯುವ ದಿನಾಂಕದಲ್ಲಿ ಸ್ವಲ್ಪ ಯಾಮಾರಿದರೂ ವಂಚಕರಿಗೆ ಹಬ್ಬವಾಗಿ ಪರಿಣಮಿಸಬಹುದು.

ಬ್ಯಾಂಕಿನ ವ್ಯವಹಾರ ಅಥವಾ ಪ್ರಮುಖ ದಾಖಲೆ ಪತ್ರಗಳಲ್ಲಿ ಸಹಿ ಹಾಕುವ ಸಂದರ್ಭ ಎಲ್ಲರೂ ಹೆಚ್ಚಾಗಿ ಅಂದಿನ ದಿನಾಂಕ ಬರೆಯುವುದು ಸಹಜ ಮತ್ತು ಕೆಲವೊಮ್ಮೆ ಅನಿವಾರ್ಯ ಕೂಡಾ. ಈ ವೇಳೆ ಅನೇಕರು ಮಾಡುವ ಸಾಮಾನ್ಯ ವಾಗಿ ವರ್ಷವನ್ನು ಶಾರ್ಟ್ ಕಟ್‌ನಲ್ಲಿ ಬರೆಯುತ್ತಾರೆ. ಉದಾಹರಣೆಗೆ 28/12/2019ರ ದಿನಾಂಕವನ್ನು 28/12/19 ಎಂದು ಬರೆಯುತ್ತಾರೆ. ಆದರೆ ಇನ್ಮುಂದೆ ಈ ಅಭ್ಯಾಸ ಬದಲಾಯಿಸುವುದು ಓಳಿತು. ಯಾಕೆಂದರೆ 2020ರ ವರ್ಷವನ್ನು 20 ಎಂದು ಶಾರ್ಟ್‌ಕರ್ಟ್‌ ಬರೆದರೆ ತೊಂದರೆಗೆ ಸಿಲುಕಬಹುದು.

2020ರಲ್ಲಿ ದಿನಾಂಕವನ್ನು ಉದಾಹರಣೆಗೆ, 31.01.2020 ಎಂದು ಪೂರ್ಣವಾಗಿ ಬರೆಯಬೇಕು. 31.01.20 ಎಂದು ಬರೆಯಬಾರದು.

ಯಾಕೆಂದರೆ ಒಂದುವೇಳೆ ನೀವು 01-01-20 ಎಂದು ಬರೆದಿರಿ ಎಂದಿಟ್ಟುಕೊಳ್ಳಿ ಆವಾಗ 20ರ ಎದುರು ಯಾವ ಇಸವಿಯನ್ನಾದರೂ ನಮೂದಿಸಲು ಸಾಧ್ಯವಿರುತ್ತದೆ. 01-01-20ನ್ನು ತಿದ್ದಿ 2000 ನೇ ಇಸವಿಯಿಂದ 2019ರವರೆಗೆ ಅಥವಾ 2020ರಿಂದ 2099ರವರೆಗೆ ಯಾವ ಇಸವಿಯನ್ನು ಬೇಕಾದರೂ ಬರೆದುಕೊಳ್ಳಲು ಅವಕಾಶವಿರುತ್ತದೆ. ಆದ್ದರಿಂದ 2020 ನ್ನು ಪೂರ್ಣವಾಗಿ ನಮೂದಿಸಿದರೆ ಸುರಕ್ಷಿತವಾಗಿರಬಹುದು..

ಹಾಗಾಗಿ ಚೆಕ್ ಗಳಲ್ಲಿ, ಒಪ್ಪಂದ ಪತ್ರಗಳಲ್ಲಿ ಅಥವಾ ಇನ್ಯಾವುದೇ ಪ್ರಮುಖ ದಾಖಲೆಗಳಲ್ಲಿ ಮುಂದಿನ ವರ್ಷ ಇಸವಿ ಬರೆಯುವಾಗ ಎಚ್ಚರಿಕೆಯಿಂದಿರಿ ಮತ್ತು ಪೂರ್ಣ ಇಸವಿಯನ್ನು ಬರೆಯುವುದು ಕಾನೂನು ಸಹಿತ ಎಲ್ಲಾ ದೃಷ್ಟಿಯಿಂದಲೂ ಸುರಕ್ಷಿತ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

14 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

15 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago