Featured

ಮುಂದಿನ ವರ್ಷ ನೀವು 2020ನೇ ಇಸವಿ ಬರೆಯುವ ಮುನ್ನ ಎಚ್ಚರ !! Vishwanews24

ಬೆಂಗಳೂರು: ಇನ್ನೆರಡು ದಿನದಲ್ಲಿ 2019ನೇ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ಯಾಕೆಂದರೆ ನೀವು ಈ ವರ್ಷ ಬರೆಯುವ ದಿನಾಂಕದಲ್ಲಿ ಸ್ವಲ್ಪ ಯಾಮಾರಿದರೂ ವಂಚಕರಿಗೆ ಹಬ್ಬವಾಗಿ ಪರಿಣಮಿಸಬಹುದು.

ಬ್ಯಾಂಕಿನ ವ್ಯವಹಾರ ಅಥವಾ ಪ್ರಮುಖ ದಾಖಲೆ ಪತ್ರಗಳಲ್ಲಿ ಸಹಿ ಹಾಕುವ ಸಂದರ್ಭ ಎಲ್ಲರೂ ಹೆಚ್ಚಾಗಿ ಅಂದಿನ ದಿನಾಂಕ ಬರೆಯುವುದು ಸಹಜ ಮತ್ತು ಕೆಲವೊಮ್ಮೆ ಅನಿವಾರ್ಯ ಕೂಡಾ. ಈ ವೇಳೆ ಅನೇಕರು ಮಾಡುವ ಸಾಮಾನ್ಯ ವಾಗಿ ವರ್ಷವನ್ನು ಶಾರ್ಟ್ ಕಟ್‌ನಲ್ಲಿ ಬರೆಯುತ್ತಾರೆ. ಉದಾಹರಣೆಗೆ 28/12/2019ರ ದಿನಾಂಕವನ್ನು 28/12/19 ಎಂದು ಬರೆಯುತ್ತಾರೆ. ಆದರೆ ಇನ್ಮುಂದೆ ಈ ಅಭ್ಯಾಸ ಬದಲಾಯಿಸುವುದು ಓಳಿತು. ಯಾಕೆಂದರೆ 2020ರ ವರ್ಷವನ್ನು 20 ಎಂದು ಶಾರ್ಟ್‌ಕರ್ಟ್‌ ಬರೆದರೆ ತೊಂದರೆಗೆ ಸಿಲುಕಬಹುದು.

2020ರಲ್ಲಿ ದಿನಾಂಕವನ್ನು ಉದಾಹರಣೆಗೆ, 31.01.2020 ಎಂದು ಪೂರ್ಣವಾಗಿ ಬರೆಯಬೇಕು. 31.01.20 ಎಂದು ಬರೆಯಬಾರದು.

ಯಾಕೆಂದರೆ ಒಂದುವೇಳೆ ನೀವು 01-01-20 ಎಂದು ಬರೆದಿರಿ ಎಂದಿಟ್ಟುಕೊಳ್ಳಿ ಆವಾಗ 20ರ ಎದುರು ಯಾವ ಇಸವಿಯನ್ನಾದರೂ ನಮೂದಿಸಲು ಸಾಧ್ಯವಿರುತ್ತದೆ. 01-01-20ನ್ನು ತಿದ್ದಿ 2000 ನೇ ಇಸವಿಯಿಂದ 2019ರವರೆಗೆ ಅಥವಾ 2020ರಿಂದ 2099ರವರೆಗೆ ಯಾವ ಇಸವಿಯನ್ನು ಬೇಕಾದರೂ ಬರೆದುಕೊಳ್ಳಲು ಅವಕಾಶವಿರುತ್ತದೆ. ಆದ್ದರಿಂದ 2020 ನ್ನು ಪೂರ್ಣವಾಗಿ ನಮೂದಿಸಿದರೆ ಸುರಕ್ಷಿತವಾಗಿರಬಹುದು..

ಹಾಗಾಗಿ ಚೆಕ್ ಗಳಲ್ಲಿ, ಒಪ್ಪಂದ ಪತ್ರಗಳಲ್ಲಿ ಅಥವಾ ಇನ್ಯಾವುದೇ ಪ್ರಮುಖ ದಾಖಲೆಗಳಲ್ಲಿ ಮುಂದಿನ ವರ್ಷ ಇಸವಿ ಬರೆಯುವಾಗ ಎಚ್ಚರಿಕೆಯಿಂದಿರಿ ಮತ್ತು ಪೂರ್ಣ ಇಸವಿಯನ್ನು ಬರೆಯುವುದು ಕಾನೂನು ಸಹಿತ ಎಲ್ಲಾ ದೃಷ್ಟಿಯಿಂದಲೂ ಸುರಕ್ಷಿತ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago