ಬೆಂಗಳೂರು : ಡಿಸೆಂಬರ್ 7 ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ, ಮಾರಾಟ ಮತ್ತು ಗೋಮಾಂಸ ಸೇವನೆಯನ್ನು ನಿಷೇಧಿಸುವ ಕಾನೂನನ್ನು ಮಂಡಿಸಲಾಗುವುದು ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಂಗಳವಾರ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ ಚೌಹಾಣ್, ಇತರ ರಾಜ್ಯಗಳು ಜಾರಿಗೆ ತಂದಿರುವ ಇದೇ ರೀತಿಯ ಕಾನೂನುಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಇಲಾಖೆಯು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಎಂದು ಹೇಳಿದರು.
“ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದ ಇತರ ಎಲ್ಲ ರಾಜ್ಯಗಳಿಗಿಂತ ನಮ್ಮ ಕಾನೂನು ಕಠಿಣವಾಗಿರುತ್ತದೆ ಎಂದು ನಾನು ಭರವಸೆ ನೀಡಬಲ್ಲೆ” ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವಿಚಾರವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಗೋಹತ್ಯೆಯನ್ನು ನಿಷೇಧಿಸಲು ಮತ್ತು ಬಲವಂತದ ಮತಾಂತರಗಳನ್ನು ತಡೆಯಲು ಬಲವಾದ ಕಾನೂನುಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…