Featured

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ: ಮುತಾಲಿಕ್ – Vishwanews24

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ: ಮುತಾಲಿಕ್

ಚಿಕ್ಕಮಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್ ಅವರು, ಹಿಂದೂಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸಮುದಾಯ ಮತ್ತು ಹಿಂದುತ್ವವನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ : ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು.. ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು’ – ಸಿಎಂ ಬೊಮ್ಮಾಯಿ – Vishwanews24

“ಕೇಂದ್ರದಲ್ಲಿ ಮೋದಿ(ಪ್ರಧಾನಿ ನರೇಂದ್ರ ಮೋದಿ) ಮತ್ತು ಉತ್ತರ ಪ್ರದೇಶದಲ್ಲಿ ಯೋಗಿ(ಸಿಎಂ ಯೋಗಿ ಆದಿತ್ಯನಾಥ್) ಹೊರತುಪಡಿಸಿ, ಹಿಂದುತ್ವವನ್ನು ರಕ್ಷಿಸಲು ಬೇರೆಯವರು ಕೆಲಸ ಮಾಡುವುದನ್ನು ಅಥವಾ ಆಡಳಿತ ನಡೆಸುವುದನ್ನು ನಾವು ನೋಡಲು ಸಾಧ್ಯವಿಲ್ಲ. ಹಿಂದೂಗಳ ಪರಿಶ್ರಮದಿಂದ ಕರ್ನಾಟಕದಲ್ಲಿ ಗೆದ್ದ ಬಿಜೆಪಿಗೆ ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.

ಇದನ್ನು ಓದಿ: ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24

ಇಂದಿಗೂ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿದ್ದು, ರೌಡಿ ಶೀಟ್‌ನಲ್ಲಿ ಹೆಸರು ಸೇರಿಸಲಾಗುತ್ತಿದೆ. ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳ ಬಗ್ಗೆ ಕರುಣೆ ತೋರಿಲ್ಲ. ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗಳೂ ನಡೆದಿವೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago