ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆನ್ ಲೈನ್ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿ-ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪರೀಕ್ಷೆ ಏನಿದ್ದರೂ ಆಫ್ ಲೈನ್ ನಲ್ಲಿ ನಡೆಯುತ್ತದೆ. ಕೆಲ ಡೀಮ್ಡ್ ವಿಶ್ವವಿದ್ಯಾಲಯಗಳು ಆನ್ ಲೈನ್ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ”ಎಂದರು.
ಕಟಪಾಡಿ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆ ! Vishwanews24
ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ ಎಂದರು.
ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಆಫ್ ಲೈನ್ ತರಗತಿಗಳನ್ನೂ ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…