ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ʼಹೊಸ ಶಿಕ್ಷಣ ನೀತಿ; ಭಾರತೀಯ ಭಾಷೆಗಳ ಅಧ್ಯಯನʼ ವಿಷಯದ ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿದ ಅವರು ಮಾತನಾಡಿದರು. ಮುಂದಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆದಿದೆ ಎಂದು ಹೇಳಿದರು.
ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ. ಈ ಬಗ್ಗೆ ಯಾವುದೇ ಗೊಂದಲ ಬೇಡ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸರಿಸಮವಾಗಿ ಕನ್ನಡವೂ ಬೆಳೆಯಬೇಕು. ಮಾತೃಭಾಷೆಯ ಅಸ್ತಿತ್ವ ಎಲ್ಲ ಕಡೆಯೂ ಇರಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…