ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ʼಹೊಸ ಶಿಕ್ಷಣ ನೀತಿ; ಭಾರತೀಯ ಭಾಷೆಗಳ ಅಧ್ಯಯನʼ ವಿಷಯದ ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿದ ಅವರು ಮಾತನಾಡಿದರು. ಮುಂದಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆದಿದೆ ಎಂದು ಹೇಳಿದರು.
ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ. ಈ ಬಗ್ಗೆ ಯಾವುದೇ ಗೊಂದಲ ಬೇಡ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸರಿಸಮವಾಗಿ ಕನ್ನಡವೂ ಬೆಳೆಯಬೇಕು. ಮಾತೃಭಾಷೆಯ ಅಸ್ತಿತ್ವ ಎಲ್ಲ ಕಡೆಯೂ ಇರಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…