Featured

ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ : ನಳಿನ್‍ಕುಮಾರ್ ಕಟೀಲ್ -Vishwanews24

ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ : ನಳಿನ್‍ಕುಮಾರ್ ಕಟೀಲ್ -Vishwanews24

ಬೆಂಗಳೂರು : ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ : ಡಿ ಕೆ ಶಿ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago