ಬೆಂಗಳೂರು : ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.
ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ : ಡಿ ಕೆ ಶಿ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]