ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್​ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ : ಬ್ರಹ್ಮಾಂಡ ಗುರೂಜಿ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ.  ಇದೇ ನವೆಂಬರ್​ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ..

ಬರುವ ನವೆಂಬರ್​ 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರಿಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ನವೆಂಬರ್​ 4ರ ಬಳಿಕ ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಲಿವೆ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅವಧಿಯನ್ನು ಪೂರೈಸುವುದಿಲ್ಲ. ಅವರ ಬಳಿಕ ಹೊಸಬರು ರಾಜ್ಯದ ಸಿಎಂ ಆಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು

ಡಿ.ಕೆ.ಶಿವಕುಮಾರ್​  ಅವರು, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್​ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.

ಹಾಗೇ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.