ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ. ಇದೇ ನವೆಂಬರ್ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ..
ಬರುವ ನವೆಂಬರ್ 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರಿಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದರು.
ನವೆಂಬರ್ 4ರ ಬಳಿಕ ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಲಿವೆ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅವಧಿಯನ್ನು ಪೂರೈಸುವುದಿಲ್ಲ. ಅವರ ಬಳಿಕ ಹೊಸಬರು ರಾಜ್ಯದ ಸಿಎಂ ಆಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು
ಡಿ.ಕೆ.ಶಿವಕುಮಾರ್ ಅವರು, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.
ಹಾಗೇ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…