ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ. ಇದೇ ನವೆಂಬರ್ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ..
ಬರುವ ನವೆಂಬರ್ 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರಿಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದರು.
ನವೆಂಬರ್ 4ರ ಬಳಿಕ ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಲಿವೆ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅವಧಿಯನ್ನು ಪೂರೈಸುವುದಿಲ್ಲ. ಅವರ ಬಳಿಕ ಹೊಸಬರು ರಾಜ್ಯದ ಸಿಎಂ ಆಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು
ಡಿ.ಕೆ.ಶಿವಕುಮಾರ್ ಅವರು, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.
ಹಾಗೇ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…