Featured

ಮುಂದುವರಿದ ಗಾಳಿ ಮಳೆ, ಉದ್ಯಾವರದಲ್ಲಿ ಶಾಲೆಗಳಿಗೆ ರಜೆ ಘೋಷಣೆ..

ಉಡುಪಿ,: ಉದ್ಯಾವರ ಪರಿಸರದಲ್ಲಿ ನಿನ್ನೆ ರಾತ್ರಿ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ.

ರಾತ್ರಿ ಬೀಸಿದ ಭಾರೀ ಗಾಳಿಗೆ ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯಿದ್ದ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದಿದೆ. ಶಂಭುಕಲ್ಲು ದೇವಳದ ಬಳಿ ಹಾಗೂ ಪಿತ್ರೋಡಿಯಲ್ಲಿ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಗುರುಳಿವೆ. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದ ಮರಗಳು ತೆರವು ಕಾರ್ಯ ನಡೆದಿದೆ. ಈ ನಡುವೆ ಮಳೆ ಅವಾಂತರದ

ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
 ಉದ್ಯಾವರ ಪರಿಸರದಲ್ಲಿ ನಿನ್ನೆಯಿಂದ ಸುರಿದ ಗಾಳಿಮಳೆಗೆ ಸುಮಾರು 70ರಷ್ಟು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಪರಿಸರದ ವಿದ್ಯುತ್ ಸಂಪರ್ಕದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಅಂಗಡಿ, ಮನೆಗಳ ಮೇಲೆ ಉರುಳಿಬಿದ್ದ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ. ಉದ್ಯಾವರದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿದ್ದ ಸುಮಾರು 15ಕ್ಕೂ ಅಧಿಕ ಜಾಹೀರಾತು ಹೋರ್ಡಿಂಗ್‌ಗಳು ಗಾಳಿಯ ಅಬ್ಬರಕ್ಕೆ ಸಿಲುಕಿ ಹಾನಿಗೊಂಡಿವೆ. ಕೆಲವು ಹೋರ್ಡಿಂಗ್‌ಗಳು ಮನೆಯ ಮೇಲೆ ಬಿದ್ದಿರುವುದು ವರದಿಯಾಗಿದೆ.

 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago