ಉಡುಪಿ,: ಉದ್ಯಾವರ ಪರಿಸರದಲ್ಲಿ ನಿನ್ನೆ ರಾತ್ರಿ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ.
ರಾತ್ರಿ ಬೀಸಿದ ಭಾರೀ ಗಾಳಿಗೆ ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯಿದ್ದ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದಿದೆ. ಶಂಭುಕಲ್ಲು ದೇವಳದ ಬಳಿ ಹಾಗೂ ಪಿತ್ರೋಡಿಯಲ್ಲಿ ಮರಗಳು ಉರುಳಿ ರಸ್ತೆಗೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಗುರುಳಿವೆ. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದ ಮರಗಳು ತೆರವು ಕಾರ್ಯ ನಡೆದಿದೆ. ಈ ನಡುವೆ ಮಳೆ ಅವಾಂತರದ
ಹಿನ್ನೆಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉದ್ಯಾವರ ಪರಿಸರದಲ್ಲಿ ನಿನ್ನೆಯಿಂದ ಸುರಿದ ಗಾಳಿಮಳೆಗೆ ಸುಮಾರು 70ರಷ್ಟು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಪರಿಸರದ ವಿದ್ಯುತ್ ಸಂಪರ್ಕದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಅಂಗಡಿ, ಮನೆಗಳ ಮೇಲೆ ಉರುಳಿಬಿದ್ದ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ. ಉದ್ಯಾವರದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿದ್ದ ಸುಮಾರು 15ಕ್ಕೂ ಅಧಿಕ ಜಾಹೀರಾತು ಹೋರ್ಡಿಂಗ್ಗಳು ಗಾಳಿಯ ಅಬ್ಬರಕ್ಕೆ ಸಿಲುಕಿ ಹಾನಿಗೊಂಡಿವೆ. ಕೆಲವು ಹೋರ್ಡಿಂಗ್ಗಳು ಮನೆಯ ಮೇಲೆ ಬಿದ್ದಿರುವುದು ವರದಿಯಾಗಿದೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…