‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್ – Vishwanews24

Featured, ರಾಜ್ಯ ನ್ಯೂಸ್

‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ನ ಕೊನೆಯ ಸರ್ಕಾರವಾಗಲಿದ್ದು, ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಮುಂದಿನ 9 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್ ಅವರು, ಡಿಕೆಶಿಯವರು ಕನಸುಕಾಣುತ್ತಿದ್ದಾರೆ. ಯಾರು ಬೇಕಾದರೂ ಬಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಬಹುದು ಎಂದು ಡಿಕೆಶಿ ಅವರು ಹೇಳುತ್ತಿದ್ದಾರೆ ಎಂದರು.

ಬಟ್ಟೆ ಸ್ವಚ್ಛವಾಗಿಲ್ಲ ಎಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ  – Vishwanews24

ಇನ್ನು ಆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ? ಬಹುತೇಕ ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೇರೆ, ಬೇರೆ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಕಾಂಗ್ರೆಸ್‌ಗೆ ಹೋಗುವವರು ಯಾರು ಇಲ್ಲ ಎಂದು ಹೇಳಿದ್ದಾರೆ.

Leave a Reply