ಮುಂಬೈ,: ಬಿಜೆಪಿಯು ಅಖಂಡ ಭಾರತದಲ್ಲಿ ನಂಬಿಕೆ ಇಟ್ಟಿದ್ದು, ಮುಂದೊಂದು ದಿನ ಕರಾಚಿಯು ಭಾರತ ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ ಪಡ್ನವಿಸ್ ಹೇಳಿದ್ದಾರೆ.
ಬಾಂದ್ರಾದಲ್ಲಿರುವ ‘ಕರಾಚಿ’ ಸಿಹಿ ತಿನಿಸು ಮಳಿಗೆಗಳ ಹೆಸರು ಬದಲಿಸುವಂತೆ ಶಿವಸೇನಾ ಮುಖಂಡ ಅಂಗಡಿ ಮಾಲೀಕರನ್ನು ಒತ್ತಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಡ್ನವಿಸ್, ಅಖಂಡ ಭಾರತದಲ್ಲಿ ನಮಗೆ ನಂಬಿಕೆ ಇದೆ. ಕರಾಚಿಯು ಮುಂದೊಂದು ದಿನ ಭಾರತದ ಭಾಗವಾಗಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಮೊದಲಿಗೆ ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ತನ್ನಿ. ನಂತರ ನಾವು ಕರಾಚಿ ಹೋಗಬಹುದು ಎಂದು ಹೇಳಿದ್ದಾರೆ.
ಇನ್ನು ಶಿವಸೇನಾ ಮುಖಂಡ ನಿತಿನ್ ಮಧುಕರ್ ನಂದಗಾವಂಕರ್ ಅವರು ಕರಾಚಿ ಸಿಹಿ ತಿನಿಸು ಮಳಿಗೆಯ ಮಾಲೀಕರಿಗೆ ಮಳಿಗೆಯ ಹೆಸರು ಬದಲಿಸುವಂತೆ ಒತ್ತಾಯಿಸಿರುವ ವಿಡಿಯೊ ಇತ್ತೀಚೆಗಷ್ಟೇ ವೈರಲ್ ಆಗಿತ್ತು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…