Featured

ಮುಂದೊಂದು ದಿನ ನಾವು ಚಂದ್ರನನ್ನು ತಲುಪುವ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ : ಪ್ರಧಾನಿ -Vishwanews24

ಬೆಂಗಳೂರು: ಮುಂದೊಂದು ದಿನ ನಾವು ಚಂದ್ರನನ್ನು ತಲುಪುವ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ವಿಜ್ಞಾನದಲ್ಲಿ ಸೋಲೆಂಬ ಪ್ರಶ್ನೆಯೇ ಇಲ್ಲ. ಸತತ ಪ್ರಯತ್ನದಿಂದ ಸಾಧನೆ ಖಂಡಿತ ಸಾಧ್ಯ. ನೀವು ನಿಮ್ಮ ಪ್ರಯೋಗಗಳನ್ನು ಮುಂದುವರೆಸಿ ಎಂದು ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳಿಗೆ ಆತ್ಮವಿಶ್ವಾಸ ತುಂಬಿದ್ದಾರೆ.

ವಿಜ್ಞಾನದಲ್ಲಿ ಪ್ರಯೋಗಗಳು ನಡೆಯುತ್ತಿರಬೇಕು. ವಿಜ್ಞಾನಕ್ಕೆ ಎಂದಿಗೂ ಸೋಲಿಲ್ಲ. ಪ್ರಯತ್ನದಿಂದಲೇ ಸಾಧನೆ ಸಾಧ್ಯ. ಖಂಡಿತ ಭವಿಷ್ಯದಲ್ಲಿ ಚಂದ್ರನನ್ನು ನಾವು ತಲುಪಿಯೇ ತಲುಪುತ್ತೇವೆ. ಇಸ್ರೋ ವಿಜ್ಞಾನಿಗಳ ಕುಟುಂಬಸ್ಥರ ಪ್ರೋತ್ಸಾಹಕ್ಕೆ ನಾವು ಕೃತಜ್ಞರು. ವಿಜ್ಞಾನಿಗಳೇ ನನಗೆ ಪ್ರೇರಣೆ. ನಿಮ್ಮ ಪರಿಶ್ರಮ ವ್ಯರ್ಥವಾಗಿಲ್ಲ. ನೀವು ಈಗ ಕಲಿತ ಪಾಠದಿಂದ ಇನ್ನಷ್ಟು ದೃಢವಾಗಿ ಗುರಿಯನ್ನು ತಲುಪುತ್ತೀರಿ. ಫಲಿತಾಂಶದ ಬಗ್ಗೆ ಯೋಚಿಸದೆ ನಿರಂತರವಾಗಿ ಪ್ರಯತ್ನ ಮುಂದುವರೆಸಿ ಎಂದಿದ್ದಾರೆ. ನಿಮ್ಮ ಕಣ್ಣುಗಳು ಎಲ್ಲವನ್ನೂ ಹೇಳುತ್ತಿದ್ದವು: ನಿಮ್ಮ ಶ್ರಮವನ್ನು ಭಾರತವೇ ಹಾಡಿಹೊಗಳುತ್ತಿದೆ. ರಾತ್ರಿ ನಿಮ್ಮ ಮನಸ್ಥಿತಿ ಅರ್ಥ ಮಾಡಿಕೊಂಡಿದ್ದೇನೆ. ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ನಾನಿದ್ದೆ. ಆಗ ನಿಮ್ಮ ಕಣ್ಣುಗಳು, ನಿಮ್ಮ ಮುಖಭಾವವೇ ನಿಮ್ಮ ನೋವನ್ನು ಹೇಳುತ್ತಿತ್ತು. ಹೀಗಾಗಿ ನಾನು ನಿಮ್ಮೊಂದಿಗೆ ಹೆಚ್ಚುಕಾಲ ಇರಲಿಲ್ಲ. ಆದರೆ, ಇಂದು ಮತ್ತೆ ನಿಮ್ಮೊಂದಿಗೆ ಕಾಲ ಕಳೆಯಬೇಕೆಂದು ಬಂದಿದ್ದೇನೆ. ನೀವೆಲ್ಲರೂ ನನಗೆ ಸ್ಫೂರ್ತಿಯಾಗಿದ್ದೀರಿ. ಇಡೀ ಭಾರತರ ನಿಮ್ಮೊಂದಿಗಿದೆ  ಎಂದು ಮೋದಿ ಹೇಳಿದ್ದಾರೆ.

ನಿಮ್ಮ ಪರಿಶ್ರಮದ ಬಗ್ಗೆ ಭಾರತೀಯರಿಗೆ ಗೊತ್ತಿದೆ. ಅಡೆತಡೆಗಳಿಂದ ಉತ್ಸಾಹ ಕಡಿಮೆಯಾಗಿಲ್ಲ, ಹೆಚ್ಚಾಗಿದೆ. ಚಂದ್ರನನ್ನು ಮುಟ್ಟುವ ನಮ್ಮ ಆಸೆ ಇಮ್ಮಡಿಯಾಗಿದೆ. ನೀವು ಮಾಡಿರುವ ಕೆಲಸ ಈವರೆಗೆ ಯಾರೂ ಮಾಡಿಲ್ಲ. ಇಂದಿನ ಕಲಿಕೆ ನಮ್ಮನ್ನು ಇನ್ನಷ್ಟು ಗಟ್ಟಿ ಮಾಡುತ್ತದೆ. ಚಂದ್ರನ ಮೇಲೆ ನೀರಿದೆ ಎಂದು ತೋರಿಸಿದ್ದು ನೀವು. ನನಗಿಂತ ಹೆಚ್ಚು ಶ್ರಮ, ಹೆಚ್ಚು ಗುರಿ ನಿಮಗಿದೆ. ನಿಮ್ಮಿಂದ ಪ್ರೇರಣೆ ಪಡೆಯಲು ನಾನಿಲ್ಲಿಗೆ ಬಂದಿದ್ದೇನೆ ಎಂದು ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳಿಗೆ ಆತ್ಮವಿಶ್ವಾಸ ತುಂಬಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

11 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago