ಅಹಮದಾಬಾದ್: ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದ್ದು, ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಮುಂದೊಂದು ದಿನ ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಮೀಸಲಾತಿಗೆ ಹೊಡೆತ ಬಿದ್ದಿದೆ. ಉದ್ಯೋಗ ಒದಗಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹೀಗಾಗಿ ಸಾರ್ವಜನಿಕ ವಲಯವನ್ನು ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ. ಈ ಮೂಲಕ ಅವರ ಸ್ನೇಹಿತರಿಗೆ ಸಹಾಯ ಮಾಡುತ್ತಿದ್ದಾರೆ. ಈ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂದೊಂದು ದಿನ ಮೋದಿಯವರು ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಕಿಡಿಕಾರಿದರು,
ಪಂಡಿತ್ ಜವಾಹರಲಾಲ್ ನೆಹರು ನಿರ್ಮಿಸಿದ ಸಾರ್ವಜನಿಕ ವಲಯದ ಕಾರ್ಖಾನೆಗಳನ್ನು ಮೋದಿ ಮುಗಿಸುತ್ತಿದ್ದಾರೆ. ಈ ದೇಶದ ಭವಿಷ್ಯದ ಪೀಳಿಗೆಗೆ ನಾವೇನನ್ನು ನೀಡುತ್ತಿದ್ದೇವೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಅನ್ನು ನಿಂದಿಸುವುದನ್ನು ಬಿಟ್ಟರೆ ಮೋದಿಯವರ ಬಳಿ ಯಾವುದಕ್ಕೂ ಉತ್ತವಿಲ್ಲ ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…