Featured

ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ : ಬಿಎಂಸಿ ಚುನಾವಣೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ – vishwanews24

ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ : ಬಿಎಂಸಿ ಚುನಾವಣೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ

ಮುಂಬಯಿ: ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಮುಂಬರುವ ಬಿಎಂಸಿ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಪಕ್ಷದ ಸಭೆಯಲ್ಲಿ ಉಭಯ ನಾಯಕರು ಒಂದಾಗಿ ಘೋಷಣೆ ಮಾಡಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಬುಧವಾರ(ಡಿ24 ) ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರ ಮೈತ್ರಿ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ.
“ಇಲ್ಲಿ ಹಾಜರಿದ್ದ ಜನರ ಸಂಖ್ಯೆ ಮತ್ತು ಉತ್ಸಾಹವನ್ನು ಗಮನಿಸಿದರೆ, ಇಂದು ಐತಿಹಾಸಿಕ ದಿನ ಎಂದು ನಾವು ಹೇಳಬಹುದು” ಎಂದು ರಾವತ್ ಹೇಳಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಮಹಾರಾಷ್ಟ್ರದ ನಾಯಕತ್ವ ಠಾಕ್ರೆ ಕುಟುಂಬಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿ “ಠಾಕ್ರೆ ಮಾತ್ರ ಮಹಾರಾಷ್ಟ್ರವನ್ನು ಮುನ್ನಡೆಸಬಲ್ಲರು. ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ’ ಎಂದರು.

ಜನವರಿ 15 ರಂದು ಬಿಎಂಸಿ ಚುನಾವಣೆ ನಡೆಯಲಿದೆ. ಅತ್ಯಂತ ಕುತೂಹಲಕಾರಿ ಚುನಾವಣೆಗೆ ಸೀಟು ಹಂಚಿಕೆಯ ವಿವರಗಳನ್ನು ರಾಜ್ ಠಾಕ್ರೆ ಬಹಿರಂಗಪಡಿಸದಿದ್ದರೂ, ಮುಂಬೈನ ಮುಂದಿನ ಮೇಯರ್ ಮರಾಠಿಗರು ಮತ್ತು ಅವರ ಮೈತ್ರಿಕೂಟದಿಂದ ಬರುತ್ತಾರೆ ಎಂದು ಪ್ರತಿಪಾದಿಸಿದ್ದಾರೆ.

ಜನವರಿ 15 ರಂದೇ ಚುನಾವಣೆ ನಡೆಯಲಿರುವ ನಾಸಿಕ್ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದಾದ್ಯಂತ 27 ಇತರ ಮಹಾನಗರ ಪಾಲಿಕೆಗಳಿಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago