ಮುಂಬಯಿ: ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಮತ್ತು ಯಾರ ನಡುವೆಯೂ ಯಾವುದೇ ವ್ಯತ್ಯಾಸಗಳಿಲ್ಲ, ಶಾಸ್ತ್ರದ ಆಧಾರದ ಮೇಲೆ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದು ಮೋಹನ್ ಭಾಗವತ್ ಕರೆ ನೀಡಿದರು.
ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಆಗಿದ್ದು, ಅಭಿಪ್ರಾಯಗಳು ಮಾತ್ರ ಭಿನ್ನವಾಗಿವೆ ಎಂದ ಅವರು, ತುಳಸಿದಾಸ್, ಕಬೀರ್ ಮತ್ತು ಸೂರದಾಸ್ ಅವರಿಗಿಂತ ಸಂತ ರೋಹಿದಾಸ್ ಅವರು ಮೇಲಿದ್ದರು. ಆದ್ದರಿಂದ ಅವರನ್ನು ಸಂತ ಶಿರೋಮಣಿ ಎಂದು ಪರಿಗಣಿಸಲಾಗಿದೆ. ಶಾಸ್ತ್ರದ ಮೂಲಕ ಬ್ರಾಹ್ಮಣರನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ಅನೇಕ ಹೃದಯಗಳನ್ನು ರೋಹಿದಾಸ್ ತಲುಪಿದ್ದರು, ದೇವರನ್ನು ನಂಬುವಂತೆ ಮಾಡಿದ್ದರು ಎಂದರು.
ಧರ್ಮವೆಂದರೆ ಹೊಟ್ಟೆ ತುಂಬಿಸುವುದಷ್ಟೇ ಅಲ್ಲ ಎಂದು ಸಂತ ರೋಹಿದಾಸರು ಹೇಳಿದ್ದರು. ನಿಮ್ಮ ಧರ್ಮಕ್ಕೆ ಅನುಗುಣವಾಗಿ ನಿಮ್ಮ ಕೆಲಸವನ್ನು ಮಾಡಿ. ಅದರಿಂದ ಸಮಾಜವನ್ನು ಒಗ್ಗೂಡಿಸಿ ಮತ್ತು ಅದರ ಪ್ರಗತಿಗೆ ಕೆಲಸ ಮಾಡಿ. ಇಂತಹ ಚಿಂತನೆಗಳು ಮತ್ತು ಉನ್ನತ ಆದರ್ಶಗಳಿಂದ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಸಂತ ರೋಹಿದಾಸರ ಶಿಷ್ಯರಾದರು ಎಂದು ಮೋಹನ್ ಭಾಗವತ್ ಹೇಳಿದರು.
ದೇವರ ಮುಂದೆ ಎಲ್ಲರೂ ಸಮಾನರು. ಆತನ ಮುಂದೆ ಜಾತಿ, ಪಂಗಡ ಎಂಬುದೆಲ್ಲಾ ಇಲ್ಲ. ಇದು ಸೃಷ್ಟಿಯಾಗಿದ್ದು ಧರ್ಮ ಗುರುಗಳಿಂದ. ಇದು ತಪ್ಪು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…