ಮುಂಬಯಿ: ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಮತ್ತು ಯಾರ ನಡುವೆಯೂ ಯಾವುದೇ ವ್ಯತ್ಯಾಸಗಳಿಲ್ಲ, ಶಾಸ್ತ್ರದ ಆಧಾರದ ಮೇಲೆ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದು ಮೋಹನ್ ಭಾಗವತ್ ಕರೆ ನೀಡಿದರು.
ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಆಗಿದ್ದು, ಅಭಿಪ್ರಾಯಗಳು ಮಾತ್ರ ಭಿನ್ನವಾಗಿವೆ ಎಂದ ಅವರು, ತುಳಸಿದಾಸ್, ಕಬೀರ್ ಮತ್ತು ಸೂರದಾಸ್ ಅವರಿಗಿಂತ ಸಂತ ರೋಹಿದಾಸ್ ಅವರು ಮೇಲಿದ್ದರು. ಆದ್ದರಿಂದ ಅವರನ್ನು ಸಂತ ಶಿರೋಮಣಿ ಎಂದು ಪರಿಗಣಿಸಲಾಗಿದೆ. ಶಾಸ್ತ್ರದ ಮೂಲಕ ಬ್ರಾಹ್ಮಣರನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ಅನೇಕ ಹೃದಯಗಳನ್ನು ರೋಹಿದಾಸ್ ತಲುಪಿದ್ದರು, ದೇವರನ್ನು ನಂಬುವಂತೆ ಮಾಡಿದ್ದರು ಎಂದರು.
ಧರ್ಮವೆಂದರೆ ಹೊಟ್ಟೆ ತುಂಬಿಸುವುದಷ್ಟೇ ಅಲ್ಲ ಎಂದು ಸಂತ ರೋಹಿದಾಸರು ಹೇಳಿದ್ದರು. ನಿಮ್ಮ ಧರ್ಮಕ್ಕೆ ಅನುಗುಣವಾಗಿ ನಿಮ್ಮ ಕೆಲಸವನ್ನು ಮಾಡಿ. ಅದರಿಂದ ಸಮಾಜವನ್ನು ಒಗ್ಗೂಡಿಸಿ ಮತ್ತು ಅದರ ಪ್ರಗತಿಗೆ ಕೆಲಸ ಮಾಡಿ. ಇಂತಹ ಚಿಂತನೆಗಳು ಮತ್ತು ಉನ್ನತ ಆದರ್ಶಗಳಿಂದ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಸಂತ ರೋಹಿದಾಸರ ಶಿಷ್ಯರಾದರು ಎಂದು ಮೋಹನ್ ಭಾಗವತ್ ಹೇಳಿದರು.
ದೇವರ ಮುಂದೆ ಎಲ್ಲರೂ ಸಮಾನರು. ಆತನ ಮುಂದೆ ಜಾತಿ, ಪಂಗಡ ಎಂಬುದೆಲ್ಲಾ ಇಲ್ಲ. ಇದು ಸೃಷ್ಟಿಯಾಗಿದ್ದು ಧರ್ಮ ಗುರುಗಳಿಂದ. ಇದು ತಪ್ಪು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…