Featured

ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್ )ಘಟಕಕ್ಕೆ ಕನ್ನಡಿಗ ಅಧಿಕಾರಿ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ -Vishwanews24

ಕಾರ್ಕಳ: ಮಹಾರಾಷ್ಟ್ರದ ಖಾರ್‌ನಲ್ಲಿ ಪೊಲೀಸ್‌ ಅಧಿಕಾರಿಯಾಗಿದ್ದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಮೂಲದ ದಯಾ ನಾಯಕ್‌ ಅವರು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ  (ಎಟಿಎಸ್‌)ದ ಮುಂಬಯಿ ಘಟಕಕ್ಕೆ ಭಡ್ತಿ ಹೊಂದಿದ್ದಾರೆ. ಈ ಮೂಲಕ ಮುಂಬಯಿ ಎಟಿಎಸ್‌ ಘಟಕಕ್ಕೆ ಭಡ್ತಿ ಹೊಂದಿದ ಹಿರಿಯ ತುಳು-ಕನ್ನಡಿಗ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಅವರಿಗೆ 2004ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹುಟ್ಟೂರಾದ ಎಣ್ಣೆಹೊಳೆಯಲ್ಲಿ ಶಾಲೆಯನ್ನು ನಿರ್ಮಿಸಿ ಸರಕಾರಕ್ಕೆ ಒಪ್ಪಿಸಿದ್ದರು. ಅವರ ಜೀವನ ಸಾಧನೆಗಳ ಮೇಲೆ ಬಾಲಿವುಡ್‌ನ‌ಲ್ಲಿ ಹಲವು ಸಿನೆಮಾಗಳು ಮೂಡಿಬಂದಿವೆ.

ಪ್ರಾಮಾಣಿಕತೆ, ಕಠಿಣ ಪರಿಶ್ರಮ, ಕರ್ತವ್ಯ ಪ್ರಜ್ಞೆ ಮತ್ತು ಸ್ನೇಹಪರತೆ ಇಂದು ತನ್ನನ್ನು ಈ ಮಟ್ಟಕ್ಕೆ ಸಾಧಿಸಲು ಸಹಾಯ ಮಾಡಿದೆ ಎಂದು ದಯಾ ನಾಯಕ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಮುಂಬೈನಲ್ಲಿ ಅಪರಾಧ ಮತ್ತು ಅಪರಾಧಿಗಳ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.
90 ರ ದಶಕದಲ್ಲಿ ಮುಂಬೈನಲ್ಲಿ ಭೂಗತ ಲೋಕವು ವಿಜೃಂಭಿಸುತ್ತಿದ್ದಾಗ ದಯಾ ನಾಯಕ್ ಪೊಲೀಸ್ ಪಡೆಗೆ ಸೇರಿದ್ದರು. ಮಾತ್ರವಲ್ಲದೆ ನಿರ್ಭಯವಾಗಿ ಭೂಗತ ಜಗತ್ತನ್ನು ಹತೋಟಿಗೆ ತೆಗೆದುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯಶಸ್ವಿಯಾದರು. 80 ಕ್ಕೂ ಹೆಚ್ಚು ಭೂಗತ ಪಾತಾಕಿಗಳನ್ನು ಎನ್ ಕೌಂಟರ್ ಮಾಡುವ ಮೂಲಕ ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ಧರಾದರು. ಮುಂಬೈನಲ್ಲಿ ಡ್ರಗ್ಸ್ ಜಾಲವನ್ನು ಮಟ್ಟ ಹಾಕುವಲ್ಲಿ ಶ್ರಮಿಸಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲದೆ ಹಲವು ಸಂಕೀರ್ಣವಾದ ಪ್ರಕರಣಗಳನ್ನು ಭೇದಿಸುವಲ್ಲಿ ಅವರು ಯಶಸ್ವಿಯಾದರು.
Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

55 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

1 hour ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

1 hour ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago