Featured

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ

ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಯಲ್ಲಿ 150 ಮಿಲಿ ಮೀಟರ್‌ ಮಳೆಯಾಗಿದೆ ಎಂದು ವರದಿ ತಿಳಿಸಿದೆ. ಇದರ ನಡುವೆ ಪಶ್ಚಿಮ ಉಪನಗರದ ಚಾಂದಿವಲಿಯಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟರೆ ಪಾಲ್ಘರ್‌ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ನಡುವೆ ಮೀನುಗಾರಿಕೆಗೆ ತೆರಳಿದ್ದ ಇಬ್ಬರ ಪೈಕಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಭಾರಿ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬಯಿಯ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಕಣ್ಣೆದುರೇ ಕಣ್ಮರೆ ಚಾಂದಿವಲಿ ವ್ಯಾಪ್ತಿಯ ಖೈರಾನಿ ರಸ್ತೆಯಲ್ಲಿನ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಸ್ಲಾಂ ಈಸಾಫ್‌ ಶೇಖ್‌ (55) ಎಂದು ಗುರುತಿಸಲಾಗಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಸ್ಲಾಂ, ಅಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ಒಂದರ ಪಕ್ಕದಿಂದ ಸಾಗುತ್ತಿದ್ದಾಗ ರಸ್ತೆಯಲ್ಲಿದ್ದ ತೆರೆದ ಮ್ಯಾನ್‌ಹೋಲ್‌ಗೆ ಹಠಾತ್‌ ಆಗಿ ಬಿದ್ದು ಕೊಚ್ಚಿ ಹೋಗಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಗುತ್ತಿಗೆ ಕಾರ್ಮಿಕರು ದುರಸ್ತಿ ಕಾರ್ಯಕ್ಕಾಗಿ ಮ್ಯಾನ್‌ಹೋಲ್‌ ಮುಚ್ಚಳವನ್ನು ತಾತ್ಕಾಲಿಕವಾಗಿ ತೆರೆದಿದ್ದರು ಎನ್ನಲಾಗಿದೆ.

ಮಳೆಯಿಂದಾಗಿ ರೈಲ್ವೇ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಮುಂಜಾನೆಯ ದಟ್ಟಣೆ ಅವಧಿಯಲ್ಲಿ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯಾಯಿತು. ಹೆಚ್ಚಿನ ರೈಲುಗಳು 10ರಿಂದ 15 ನಿಮಿಷ ತಡವಾಗಿ ಧಾವಿಸುತ್ತಿದ್ದ ಕಾರಣ ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಕಂಡುಬಂದಿತು.

ಮಧ್ಯಾಹ್ನದ ವೇಳೆಗೆ ಮಳೆ ಕೊಂಚ ಬಿಡುವು ನೀಡಿದೆಯಾದರೂ, ಭಾರತೀಯ ಹವಾಮಾನ ಇಲಾಖೆ ಮುಂಬಯಿ ಮತ್ತು ಅದರ ಉಪನಗರಗಳಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದೆ ಎಂದು ವರದಿ ತಿಳಿಸಿದೆ

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

27 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

51 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

1 hour ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

1 hour ago