ಮುಂಬೈ : ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ.
ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು.
ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್ಶಿಪ್ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಬುಧವಾರ ಸಂಜೆ ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಪೊಲೀಸರು ಆರೋಪಿ ಮನೋಜ್ ಸಹಾನಿಯನ್ನು ಬಂಧಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…