Featured

ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ  ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ – Vishwanews24

ಮುಂಬಯಿ : ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ದೇಹವನ್ನು ತುಂಡು ಮಾಡಿ  ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಮುಂಬೈ : ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ.

ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು.

ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಬುಧವಾರ ಸಂಜೆ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಪೊಲೀಸರು ಆರೋಪಿ ಮನೋಜ್ ಸಹಾನಿಯನ್ನು ಬಂಧಿಸಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago