Featured

ಮುಂಬಯಿ : ಸುಂದರವಾಗಿ ಕಾಣಬೇಕೆಂದು 17,500 ಕೊಟ್ಟು ಫೇಷಿಯಲ್ ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಮಹಿಳೆ – Vishwanews24

ಮುಂಬಯಿ : ಸುಂದರವಾಗಿ ಕಾಣಬೇಕೆಂದು 17,500 ಕೊಟ್ಟು ಫೇಷಿಯಲ್ ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಮಹಿಳೆ

ಮುಂಬಯಿ: ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ಏನೇನೆಲ್ಲಾ ಮಾಡಿಕೊಳ್ಳುತ್ತಾರೆ, ಇದರಿಂದ ಕೆಲವರ ಸೌಂದರ್ಯ ಹೆಚ್ಚಾದರೆ ಇನ್ನು ಕೆಲವರದ್ದು ಇದ್ದ ಸೌಂದರ್ಯವೂ ಹೋಗಿ ಇನ್ನೇನೋ ಆಗಿ ಬಿಡುತ್ತದೆ, ಅದರಂತೆ ಮಹಾರಾಷ್ಟ್ರದ ಮಹಿಳೆಯೊಬ್ಬರು ತನ್ನ ಮುಖದ ಸೌಂದರ್ಯ ಹೆಚ್ಚಿಸಲು ಬರೋಬ್ಬರಿ 17,500 ಖರ್ಚು ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಘಟನೆ ನಡೆದಿದೆ.

ಕೆಲವೊಮ್ಮೆ ನಾವು ಹಚ್ಚಿಕೊಳ್ಳುವ ಸೌಂದರ್ಯ ವರ್ಧಕಗಳು ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತವೆ ಅದೇ ರೀತಿ ಮಹಾರಾಷ್ಟ್ರದ ಮಹಿಳೆಯ ಮುಖಕ್ಕೆ ಮಾಡಿದ ಫೇಷಿಯಲ್ ನಿಂದ ಮಹಿಳೆಯ ಮುಖದ ಚರ್ಮವೇ ಸುಟ್ಟು ಹೋಗಿದೆ.

ಘಟನೆಯ ವಿವರ:
ಜೂನ್ 17 ರಂದು ಮಹಿಳೆಯೊಬ್ಬರು ಅಂಧೇರಿಯ ಕಾಮಧೇನು ಶಾಪಿಂಗ್ ಸೆಂಟರ್‌ನಲ್ಲಿರುವ ಗ್ಲೋ ಲಕ್ಸ್ ಸಲೂನ್‌ ಗೆ ತೆರಳಿ 17,500 ರೂಪಾಯಿ ಮೌಲ್ಯದ ಹೈಡ್ರಾಫೇಶಿಯಲ್ ಚಿಕಿತ್ಸೆ ಪಡೆದುಕೊಂಡಿದ್ದರು ಚಿಕಿತ್ಸೆ ಪಡೆದು ಮನೆಗೆ ಬಂದ ಮಹಿಳೆಗೆ ಮುಖದಲ್ಲಿ ತುರಿಕೆಯ ಅನುಭವಾಗಿದೆ ಅಲ್ಲದೆ ಕೆಲವೇ ಹೊತ್ತಿನಲ್ಲಿ ಮುಖದ ಚರ್ಮ ಸುಟ್ಟು ಹೋಗಿ ವಿರೂಪಗೊಂಡಿದೆ.

ಹೈಡ್ರಾಫೇಶಿಯಲ್ ಎಂಬುದು ವೈದ್ಯಕೀಯ – ದರ್ಜೆಯ ರಿಸರ್ಫೇಸಿಂಗ್ ಚಿಕಿತ್ಸೆಯಾಗಿದ್ದು ಪರವಾನಗಿ ಪಡೆದ ವೈದ್ಯಕೀಯ ವೃತ್ತಿಪರರು, ಪ್ರಮಾಣೀಕೃತ ಹೈಡ್ರಾಫೇಶಿಯಲ್ ಸೌಂದರ್ಯಶಾಸ್ತ್ರಜ್ಞರು ಲಭ್ಯವಿರುವಲ್ಲಿ ಈ ಚಿಕಿತ್ಸೆಯನ್ನು ನೀಡಲಾಗುತ್ತದೆ ಆದರೆ ಈ ಬ್ಯೂಟಿ ಪಾರ್ಲರ್ ನಲ್ಲಿ ನುರಿತ ತಜ್ಞರಿಂದಲೇ ಚಿಕಿತ್ಸೆ ನೀಡಲಾಗಿತ್ತೆ ಎಂಬುದು ಪ್ರಶ್ನೆಯಾಗಿದೆ.

ಮಹಿಳೆ ತನ್ನ ಸುಂದರವಾದ ಮುಖದ ಕಳೆಯನ್ನು ಕಳೆದುಕೊಂಡು ನರಕಯಾತನೆ ಅನುಭವಿಸುತ್ತಿದ್ದಾರೆ. ಅಲ್ಲದೆ ಚಿಕಿತ್ಸೆ ನೀಡಿದ ಬ್ಯೂಟಿ ಪಾರ್ಲರ್ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago